alex Certify ಪ್ರಮುಖ ಯಾತ್ರಾ ಸ್ಥಳ ʼನಂಜನಗೂಡು ನಂಜುಂಡೇಶ್ವರʼ ದೇವಾಲಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರಮುಖ ಯಾತ್ರಾ ಸ್ಥಳ ʼನಂಜನಗೂಡು ನಂಜುಂಡೇಶ್ವರʼ ದೇವಾಲಯ

ನಂಜನಗೂಡು ಎಂದ ಕೂಡಲೇ ಕೆಲವರಿಗೆ ಹಲ್ಲಿನ ಪುಡಿ ನೆನಪಾಗುತ್ತದೆ. ಮೈಸೂರಿನಿಂದ ಸುಮಾರು 25 ಕಿಲೋ ಮೀಟರ್ ದೂರದಲ್ಲಿರುವ ನಂಜನಗೂಡು ಪ್ರಮುಖ ಯಾತ್ರಾ ಸ್ಥಳ. ಹೆಚ್ಚಿನ ಸಂಖ್ಯೆಯ ಪ್ರವಾಸಿಗರು, ಯಾತ್ರಾರ್ಥಿಗಳು ಇಲ್ಲಿಗೆ ಭೇಟಿ ಕೊಡುತ್ತಾರೆ. ಕಪಿಲಾ ನದಿಯ ದಂಡೆಯಲ್ಲಿರುವ ನಂಜನಗೂಡಿನಲ್ಲಿ ನಂಜುಂಡೇಶ್ವರ ದೇವಾಲಯ ಇದೆ.

ಕಪಿಲಾ ನದಿಯ ದಂಡೆಯ ತೀರದಲ್ಲಿ ಪರಶುರಾಮ ತಪಸ್ಸು ಮಾಡಿದ್ದನೆಂಬ ಐತಿಹ್ಯ ಇದೆ. ಪರಶುರಾಮನ ತಪಸ್ಸಿಗೆ ಒಲಿದ ಶಿವನು ಪ್ರತ್ಯಕ್ಷನಾಗಿ ವರ ನೀಡಿದ್ದ ಈ ಸ್ಥಳದಲ್ಲಿ ನಂತರದಲ್ಲಿ ಗೌತಮ ಋಷಿಗಳು ತಪಸ್ಸು ಮಾಡಿ ದೇವಾಲಯವನ್ನು ಅಭಿವೃದ್ಧಿಪಡಿಸಿದ್ದರೆನ್ನಲಾಗಿದೆ. ದಕ್ಷಿಣ ಭಾರತದ ದೊಡ್ಡ ದೇವಾಲಯಗಳಲ್ಲಿ ನಂಜನಗೂಡು ನಂಜುಂಡೇಶ್ವರ ದೇವಾಲಯವೂ ಒಂದಾಗಿದೆ. 11ನೇ ಶತಮಾನದಲ್ಲಿ ಚೋಳರಿಂದ ಈ ದೇವಾಲಯ ವಿಸ್ತರಣೆಗೊಂಡಿತೆಂದು ಹೇಳಲಾಗಿದೆ. ಸುಮಾರು 385 ಅಡಿ ಉದ್ದ, 160 ಅಡಿ ಅಗಲದ ಈ ದೇವಾಲಯದಲ್ಲಿ 140ಕ್ಕೂ ಹೆಚ್ಚು ಕಂಬಗಳ ಸಂಕೀರ್ಣವಿದೆ.

1845ರಲ್ಲಿ ಮುಮ್ಮಡಿ ಕೃಷ್ಣರಾಜ ಒಡೆಯರ್, ನಂಜನಗೂಡು ನಂಜುಂಡೇಶ್ವರ ದೇವಾಲಯಕ್ಕೆ ಗೋಪುರ ನಿರ್ಮಿಸಿದರು. ಇಲ್ಲಿ ನಡೆಯುವ ರಥೋತ್ಸವಕ್ಕೆ ವಿವಿಧೆಡೆಯಿಂದ ಲಕ್ಷಾಂತರ ಭಕ್ತರು ಭೇಟಿ ಕೊಡುತ್ತಾರೆ. ವೈಭವದಿಂದ ನಡೆಯುವ ತೆಪ್ಪೋತ್ಸವವನ್ನು ಜನ ಕಣ್ತುಂಬಿಕೊಳ್ಳುತ್ತಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...