alex Certify BIG NEWS: ಈ ಬಾರಿ ಅನಂತ್ ಕುಮಾರ್ ಹೆಗಡೆಗೆ ಬಿಜೆಪಿ ಟಿಕೆಟ್ ಕೈ ತಪ್ಪುವ ಸಾಧ್ಯತೆ: ಕಾಗೇರಿ, ಕೋಣೆಮನೆ, ಸೂಲಿಬೆಲೆ ಅಭ್ಯರ್ಥಿಗಳಾಗುವ ಸಂಭವ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಈ ಬಾರಿ ಅನಂತ್ ಕುಮಾರ್ ಹೆಗಡೆಗೆ ಬಿಜೆಪಿ ಟಿಕೆಟ್ ಕೈ ತಪ್ಪುವ ಸಾಧ್ಯತೆ: ಕಾಗೇರಿ, ಕೋಣೆಮನೆ, ಸೂಲಿಬೆಲೆ ಅಭ್ಯರ್ಥಿಗಳಾಗುವ ಸಂಭವ

ಬೆಂಗಳೂರು: ವಿವಾದಿತ ಹೇಳಿಕೆಗಳ ಕಾರಣದಿಂದ ಉತ್ತರ ಕನ್ನಡ ಸಂಸದ ಅನಂತ್ ಕುಮಾರ್ ಹೆಗಡೆಯವರಿಗೆ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಮರು ಸ್ಪರ್ಧೆಗೆ ಅವಕಾಶ ಸಿಗುವ ಸಾಧ್ಯತೆ ಕ್ಷೀಣಿಸಿದೆ.

ಸಂವಿಧಾನ ತಿದ್ದುಪಡಿ ಸೇರಿದಂತೆ ಹಲವು ಸೂಕ್ಷ್ಮ ವಿಚಾರ ಪ್ರಸ್ತಾಪಿಸಿ ವಿವಾದಕ್ಕೆ ಗುರಿಯಾದ ಅನಂತ್ ಕುಮಾರ್ ಹೆಗಡೆಯವರಿಗೆ ಟಿಕೆಟ್ ಕೈತೋಪುವ ಸಾಧ್ಯತೆ ಇದೆ. ಈ ಬಾರಿ ಅನಂತ್ ಕುಮಾರ್ ಹೆಗಡೆಯವರಿಗೆ ಟಿಕೆಟ್ ನೀಡುವುದಿಲ್ಲ ಎನ್ನುವ ಚರ್ಚೆ ಆರಂಭದಿಂದಲೂ ನಡೆದಿತ್ತು. ಕಳೆದ ಒಂದು ವರ್ಷದಿಂದ ರಾಜಕಾರಣದಿಂದ ಅನಂತ್ ಕುಮಾರ್ ಹೆಗಡೆ ದೂರವಿದ್ದರು. ಚುನಾವಣೆ ಸಮೀಪಿಸುತ್ತಿದ್ದಂತೆ ಸಕ್ರಿಯರಾದ ಅವರು ಜನ ಸಂಪರ್ಕದಲ್ಲಿ ತೊಡಗಿದ್ದಾರೆ.

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಅನಂತಕುಮಾರ ಹೆಗಡೆ ಬದಲಿಗೆ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಬಿಜೆಪಿ ರಾಜ್ಯ ವಕ್ತಾರ ಹರಿಪ್ರಕಾಶ್ ಕೋಣೆಮನೆ, ಚಿಂತಕ ಚಕ್ರವರ್ತಿ ಸೂಲಿಬೆಲೆ ಅವರ ಹೆಸರು ಪ್ರಮುಖವಾಗಿ ಕೇಳಿ ಬಂದಿದ್ದು, ಬಿಜೆಪಿ ಹೈಕಮಾಂಡ್ ಯಾರಿಗೆ ಟಿಕೆಟ್ ನೀಡಲಿದೆ ಎಂಬುದನ್ನು ಕಾದು ನೋಡಬೇಕಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...