alex Certify BIG NEWS: ಮಹಿಷ ರಂಗೋಲಿ ತುಳಿದಿದ್ದಕ್ಕೆ ಹಲವರ ವಿರುದ್ಧ FIR ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಹಿಷ ರಂಗೋಲಿ ತುಳಿದಿದ್ದಕ್ಕೆ ಹಲವರ ವಿರುದ್ಧ FIR ದಾಖಲು

ಮೈಸೂರು: ಅಂಧಕಾಸುರ ಸಂಹಾರ ಆಚರಣೆಯಲ್ಲಿ ಮಹಿಷ ರಂಗೋಲಿ ತುಳಿದ ಹಲವರ ವಿರುದ್ಧ ಎಫ್ ಐ ಆರ್ ದಾಖಲಿಸಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ ನಡೆದಿದೆ.

ನಂಜನಗೂಡಿನಲ್ಲಿ ಅಂಧಕಾಸುರನ ಸಂಹಾರ ಆಚರಣೆ ನಡೆಸಲಾಗುತಿತ್ತು. ಈ ವೇಳೆ ಬೃಹತ್ ಮಹಿಷ ರಂಗೋಲಿ ಹಾಕಲಾಗಿದೆ. ಈ ವೇಳೆ ಗಲಾಟೆ ನಡೆದಿದೆ. ಮೌಢ್ಯಾಚರಣೆ ಮಾಡುತ್ತಿದ್ದಾರೆ ಎಂದು ನಂಜನಗೂಡು ಠಾಣೆಯಲ್ಲಿ ಮಾಲೇಶ್ ಎಂಬುವವರು ದೂರು ನೀಡಿದ್ದು, ಕಲಿಪೇಶ್, ಅನಂತ್, ಕಿರಣ್, ರಾಜು, ರವಿ, ಗಿರೀಶ್ ಸೇರಿದಂತೆ 6 ಜನರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ಮಹಿಷನ ಫ್ಲೆಕ್ಸ್ ಅಳವಡಿಸಿ ರೊಂಗಲಿ ಬಿಡಿಸಿ ಬಳಿಕ ಸಂಹಾರ ಮಾಡಲಾಗಿದೆ. ಮಹಿಷ ಚಿತ್ರ ತುಳಿಯುವ ವೇಳೆ ಕೆಲವರು ವಿರೋಧಿಸಿದ್ದು ಈ ವೇಳೆ ಹಲ್ಲೆ ಯತ್ನ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಅಂಧಕಾಸುರ ಸಂಹಾರ ಆಚರಣೆ ತಡೆದವರ ವಿರುದ್ಧವೂ ಪ್ರಕರಣ ದಾಖಲಾಗಿದೆ. ಬಸವರಾಜು, ಮೆಲ್ಲಹಳ್ಳಿ ನಾರಾಯಣ, ಅಭಿನಾಗಭೂಷನ್, ನಟೇಶ್ ಅಭಿ ಪವಾರ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...