alex Certify BIG NEWS: ಜಿಲ್ಲೆಗೊಂದು ವಿಮಾನ ನಿಲ್ದಾಣ ನಿರ್ಮಿಸಲು ಅಧಿಕಾರಿಗಳಿಗೆ ಸಿಎಂ ಜಗನ್ ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಜಿಲ್ಲೆಗೊಂದು ವಿಮಾನ ನಿಲ್ದಾಣ ನಿರ್ಮಿಸಲು ಅಧಿಕಾರಿಗಳಿಗೆ ಸಿಎಂ ಜಗನ್ ಸೂಚನೆ

ಆಂಧ್ರಪ್ರದೇಶದಲ್ಲಿ ಒಂದು ಜಿಲ್ಲೆಗೊಂದು ವಿಮಾನ ನಿಲ್ದಾಣ ನಿರ್ಮಿಸಲು ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಚಿಂತನೆ ನಡೆಸಿದ್ದಾರೆ. ಏರ್ಪೋರ್ಟ್ ನಿರ್ಮಾಣ ಸಂಬಂಧ ಸಿದ್ಧತೆ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಆಂಧ್ರ ಪ್ರದೇಶದ ಎಲ್ಲಾ ಜಿಲ್ಲೆಗಳಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡಲು ಅಗತ್ಯವಾದ ಕಾರ್ಯಯೋಜನೆ ರೂಪಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಪ್ರತಿ ಜಿಲ್ಲೆಯಲ್ಲಿ ಗುಣಮಟ್ಟದ ವಿಮಾನ ನಿಲ್ದಾಣಗಳನ್ನು ಸ್ಥಾಪಿಸಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

‘ಒಂದು ಜಿಲ್ಲೆ – ಒಂದು ವಿಮಾನ ನಿಲ್ದಾಣ’ ಪರಿಕಲ್ಪನೆಯಡಿಯಲ್ಲಿ ರಾಜ್ಯದಲ್ಲಿ ಕನಿಷ್ಠ ಏಳು ಹೊಸ ವಿಮಾನ ನಿಲ್ದಾಣಗಳನ್ನು ಯೋಜಿಸಲು ಮತ್ತು ನಿರ್ಮಿಸಲು ಮೂಲಸೌಕರ್ಯ ಮತ್ತು ಹೂಡಿಕೆ  ಇಲಾಖೆಗೆ ನಿರ್ದೇಶನ ನೀಡಿದ್ದಾರೆ. ಆಂಧ್ರಪ್ರದೇಶವು ವಿಶಾಖಪಟ್ಟಣಂ, ವಿಜಯವಾಡ, ತಿರುಪತಿ, ರಾಜಮಹೇಂದ್ರವರಂ, ಕರ್ನೂಲ್ ಮತ್ತು ಕಡಪದಲ್ಲಿ ಕ್ರಿಯಾತ್ಮಕ ವಿಮಾನ ನಿಲ್ದಾಣಗಳೊಂದಿಗೆ 13 ಜಿಲ್ಲೆಗಳನ್ನು ಹೊಂದಿದೆ.

ವಿಜಯನಗರಂ ಜಿಲ್ಲೆಯ ಭೋಗಾಪುರಂ, ಭೋಗಾಪುರಂ ಮತ್ತು ದಗದರ್ತಿ ವಿಮಾನ ನಿಲ್ದಾಣಗಳ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಮುಖ್ಯಮಂತ್ರಿಗಳು ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...