alex Certify ಬೆಚ್ಚಿ ಬೀಳಿಸುವ ಘಟನೆ: ಬಾತ್ರೂಮ್ ನಲ್ಲಿ ಬಚ್ಚಿಟ್ಟುಕೊಂಡ್ರೂ ಲೈಂಗಿಕ ದೌರ್ಜನ್ಯಕ್ಕೆ ಯತ್ನ: ಬಾಯಿಗೆ ಆಸಿಡ್ ಸುರಿದು ಕತ್ತು ಸೀಳಿದ ದುಷ್ಕರ್ಮಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಚ್ಚಿ ಬೀಳಿಸುವ ಘಟನೆ: ಬಾತ್ರೂಮ್ ನಲ್ಲಿ ಬಚ್ಚಿಟ್ಟುಕೊಂಡ್ರೂ ಲೈಂಗಿಕ ದೌರ್ಜನ್ಯಕ್ಕೆ ಯತ್ನ: ಬಾಯಿಗೆ ಆಸಿಡ್ ಸುರಿದು ಕತ್ತು ಸೀಳಿದ ದುಷ್ಕರ್ಮಿ

ಲೈಂಗಿಕ ದೌರ್ಜನ್ಯ ಎಸಗುವ ಪ್ರಯತ್ನ ವಿರೋಧಿಸಿದ ಅಪ್ರಾಪ್ತ ಬಾಲಕಿ ಬಾಯಿಗೆ ಆ್ಯಸಿಡ್ ಸುರಿದ ದುಷ್ಕರ್ಮಿಯೊಬ್ಬ ಆಕೆಯ ಕತ್ತು ಸೀಳಿದ ಘಟನೆ ಆಂಧ್ರಪ್ರದೇಶದ SPSR ನೆಲ್ಲೂರು ಜಿಲ್ಲೆಯ ಹಳ್ಳಿಯೊಂದರಲ್ಲಿ ಸೋಮವಾರ ರಾತ್ರಿ ನಡೆದಿದೆ.

14 ವರ್ಷದ ಬಾಲಕಿ 9 ನೇ ತರಗತಿ ವಿದ್ಯಾರ್ಥಿನಿಯಾಗಿದ್ದು, ತನ್ನ ಮನೆಯಲ್ಲಿ ಒಬ್ಬಳೇ ಇದ್ದಾಗ ಆರೋಪಿ ನುಗ್ಗಿದ್ದಾನೆ. ತನ್ನನ್ನು ರಕ್ಷಿಸಿಕೊಳ್ಳುವ ಪ್ರಯತ್ನದಲ್ಲಿ ಸಂತ್ರಸ್ತೆ ವಾಶ್ ರೂಂಗೆ ಓಡಿ ಹೋಗಿ ಒಳಗೆ ಲಾಕ್ ಮಾಡಿಕೊಂಡಿದ್ದಾಳೆ.

ಯುವಕ ಬಾಗಿಲು ಒಡೆದು ಒಳ ನುಗ್ಗಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸಿದ್ದಾನೆ. ಆತನ ಪ್ರಯತ್ನಕ್ಕೆ ಆಕೆ ಪ್ರತಿರೋಧ ತೋರಿದ ಕಾರಣ ಟಾಯ್ಲೆಟ್ ಕ್ಲೀನಿಂಗ್ ಆ್ಯಸಿಡ್‌ ಅನ್ನು ಆಕೆಯ ಬಾಯಿ ಮತ್ತು ಮುಖದ ಮೇಲೆ ಸುರಿದು ಹಲ್ಲೆ ನಡೆಸಿದ್ದಾನೆ. ಆಕೆ ಕಿರುಚಲು ಆರಂಭಿಸಿದಾಗ ದುಷ್ಕರ್ಮಿ ಚಾಕುವಿನಿಂದ ಆಕೆಯ ಕತ್ತು ಸೀಳಿ ಪರಾರಿಯಾಗಿದ್ದಾನೆ.

ಬಾಲಕಿ ರಕ್ತದ ಮಡುವಿನಲ್ಲಿ ಬಿದ್ದಿರುವುದನ್ನು ಕಂಡ ನೆರೆಹೊರೆಯವರು ಯಾವುದೋ ಕೆಲಸದ ನಿಮಿತ್ತ ಹೋಗಿದ್ದ ಆಕೆಯ ಪೋಷಕರಿಗೆ ಮಾಹಿತಿ ನೀಡಿದ್ದಾರೆ. ಸಂತ್ರಸ್ತೆಯನ್ನು ಆಸ್ಪತ್ರೆಗೆ ರವಾನಿಸಲಾಗಿದ್ದು, ಆಕೆಯ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.

ಆರೋಪಿ ನಾಗರಾಜು ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಈತ ಸಂತ್ರಸ್ತೆಯ ಸಂಬಂಧಿ ಎನ್ನಲಾಗಿದೆ. ಆರೋಪಿಗೆ ಇನ್ನೂ ಕೆಲವರು ಸಹಾಯ ಮಾಡಿರುವ ಸಾಧ್ಯತೆ ಇದೆ ಎಂದು ಪೊಲೀಸರು ಶಂಕಿಸಿದ್ದಾರೆ. ಈ ಘಟನೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿ ಆರೋಪಿಗೆ ಕಠಿಣ ಶಿಕ್ಷೆಯಾಗಬೇಕೆಂದು ಒತ್ತಾಯಿಸಲಾಗಿದೆ.

ಪೊಲೀಸರು ಆರೋಪಿ ಮೇಲೆ ಅತ್ಯಾಚಾರ ಮತ್ತು ಕೊಲೆ ಯತ್ನದ ಮೊಕದ್ದಮೆ ದಾಖಲಿಸಿದ್ದಾರೆ ಎಂದು ರಾಜ್ಯದ ಕೃಷಿ ಸಚಿವ ಕಾಕಣಿ ಗೋವರ್ಧನ ರೆಡ್ಡಿ ಅವರು ಆಸ್ಪತ್ರೆಗೆ ಭೇಟಿ ನೀಡಿ ಸಂತ್ರಸ್ತೆಯ ಕುಟುಂಬ ಸದಸ್ಯರನ್ನು ಭೇಟಿ ಮಾಡಿದ ನಂತರ ಮಾಹಿತಿ ನೀಡಿದ್ದಾರೆ.

ನೆಲ್ಲೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಜಯರಾವ್ ಕೂಡ ಆಸ್ಪತ್ರೆಗೆ ಭೇಟಿ ನೀಡಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದು, ಶೀಘ್ರದಲ್ಲಿಯೇ ಎಲ್ಲ ವಿವರಗಳು ಹೊರಬರಲಿವೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...