alex Certify BIG NEWS: ಅಂಗನವಾಡಿ, ಶಾಲೆ, ಪಂಚಾಯ್ತಿಯಲ್ಲೂ ಕೊರೋನಾ ಲಸಿಕೆ –ಆಧಾರ್ ಜೋಡಣೆಗೆ ಪ್ಲಾನ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಅಂಗನವಾಡಿ, ಶಾಲೆ, ಪಂಚಾಯ್ತಿಯಲ್ಲೂ ಕೊರೋನಾ ಲಸಿಕೆ –ಆಧಾರ್ ಜೋಡಣೆಗೆ ಪ್ಲಾನ್

ನವದೆಹಲಿ: ಕೊರೋನಾ ಲಸಿಕೆ ಲಭ್ಯವಾಗುತ್ತಿದ್ದಂತೆ ಎಲ್ಲ ಜನರಿಗೂ ನೀಡಲು ಯೋಜನೆ ರೂಪಿಸಲಾಗುತ್ತಿದೆ. ಅಂಗನವಾಡಿ ಕೇಂದ್ರ, ಶಾಲೆ, ಪಂಚಾಯಿತಿ ಕಟ್ಟಡಗಳು ಕೂಡ ಕೋವಿಡ್-19 ವ್ಯಾಕ್ಸಿನೇಷನ್ ತಾಣಗಳಾಗಿ ಬಳಕೆಯಾಗಿವೆ.

ಕೇಂದ್ರ ಆರೋಗ್ಯ ಸಚಿವಾಲಯ ಡಿಜಿಟಲ್ ಪ್ಲಾಟ್ ಫಾರಂ ಮೂಲಕ ಮೇಲ್ವಿಚಾರಣೆ ಮಾಡಲಿದ್ದು, ಅಗತ್ಯವಿರುವವರಿಗೆ ಆರಂಭಿಕ ಹಂತದಲ್ಲಿ ಲಸಿಕೆ ನೀಡಲಾಗುತ್ತದೆ. ಎಲ್ಲರಿಗೂ ಲಸಿಕೆ ನೀಡುವ ನಿಟ್ಟಿನಲ್ಲಿ ಯೋಜನೆಯನ್ನು ರೂಪಿಸಲಾಗಿದೆ. ತಜ್ಞರ ಗುಂಪೊಂದು ಚರ್ಚಿಸಿದ ನೀಲನಕ್ಷೆಯ ಪ್ರಕಾರ, ರಾಜ್ಯ ಸರ್ಕಾರಗಳು ರೋಗನಿರೋಧಕ ಲಸಿಕೆ ನೀಡುವ ಕಾರ್ಯಕ್ರಮದ ಅಡಿಯಲ್ಲಿ ವ್ಯಾಕ್ಸಿನೇಷನ್ ಬೂತ್ ಗಳಾಗಿ ಬಳಸಬಹುದಾದ ಕಟ್ಟಡಗಳನ್ನು ಗುರುತಿಸಲಿವೆ.

ವ್ಯಾಕ್ಸಿನೇಷನ್ ತಾಣಗಳಾಗಿ ಕೇವಲ ಆರೋಗ್ಯ ಸೌಲಭ್ಯಗಳಿರುವ ಕಟ್ಟಡಗಳನ್ನು ಬಳಸಿಕೊಳ್ಳುವುದಿಲ್ಲ. ಇವುಗಳೊಂದಿಗೆ ಅಂಗನವಾಡಿ ಕೇಂದ್ರ, ಶಾಲೆ, ಪಂಚಾಯಿತಿ ಕಟ್ಟಡ ಮತ್ತು ರಾಜ್ಯ ಸರ್ಕಾರಗಳು ಗುರುತಿಸುವಂತಹ ಇತರ ಕಟ್ಟಡಗಳಲ್ಲಿಯೂ ವ್ಯಾಕ್ಸಿನೇಷನ್ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ.

ದಿನಾಂಕ ಮತ್ತು ಸ್ಥಳವನ್ನು ಲಸಿಕೆ ಪಡೆಯುವವರಿಗೆ ಎಸ್ಎಂಎಸ್ ಮೂಲಕ ನೀಡಲಾಗುವುದು. ಆಧಾರ್ ಕಾರ್ಡ್ ಗಳೊಂದಿಗೆ ಫಲಾನುಭವಿಗಳನ್ನು ಗುರುತಿಸಲಾಗುವುದು. ಆಧಾರ್ ಇಲ್ಲದವರು ಸರ್ಕಾರದ ಯಾವುದೇ ಗುರುತಿನ ಚೀಟಿಯನ್ನು ಬಳಕೆ ಮಾಡಬಹುದಾಗಿದೆ ಎಂದು ಹೇಳಲಾಗಿದೆ.

ರೋಗ ನಿರೋಧಕ ಪಟ್ಟಿಯಲ್ಲಿರುವ ಪ್ರತಿಯೊಬ್ಬ ವ್ಯಕ್ತಿಯು ನಕಲು ಮಾಡುವುದನ್ನು ತಪ್ಪಿಸಲು ಮತ್ತು ಫಲಾನುಭವಿಗಳನ್ನು ಪತ್ತೆ ಹಚ್ಚಲು ಅವರ ಆಧಾರ್ ಕಾರ್ಡ್‌ಗಳೊಂದಿಗೆ ಲಿಂಕ್ ಮಾಡಲಾಗುವುದು. ಆಧಾರ್ ಕಾರ್ಡ್ ಹೊಂದಿಲ್ಲದಿದ್ದರೆ, ಸರ್ಕಾರದ ಫೋಟೋ ಗುರುತಿನ ಚೀಟಿ ಬಳಸಬಹುದು ಎಂದು ಮೂಲಗಳು ತಿಳಿಸಿವೆ.

ಎಲೆಕ್ಟ್ರಾನಿಕ್ ಲಸಿಕೆಯ ಗುಪ್ತಚರ ಜಾಲ(eVIN – The Electronic Vaccine Intelligence Network) ವ್ಯವಸ್ಥೆಯು ಯುಐಪಿ ಅಡಿಯಲ್ಲಿ ದೇಶದ ಎಲ್ಲಾ ಕೋಲ್ಡ್ ಚೈನ್ ಪಾಯಿಂಟ್ ಗಳಲ್ಲಿ ಲಸಿಕೆ ದಾಸ್ತಾನು ಮತ್ತು ಶೇಖರಣಾ ತಾಪಮಾನದ ಬಗ್ಗೆ ಮಾಹಿತಿ ಒದಗಿಸಲಿವೆ.

ಎಲ್ಲರಿಗೂ ಲಸಿಕೆಯನ್ನು ನೀಡುವ ಉದ್ದೇಶದೊಂದಿಗೆ ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಸಹಯೋಗದಲ್ಲಿ ಸ್ವಯಂಸೇವಕರು, ನಾಗರಿಕರು, ಸಾಮಾಜಿಕ ಸಂಸ್ಥೆಗಳು ಸೇರಿದಂತೆ ಎಲ್ಲರನ್ನೂ ಒಳಗೊಂಡ ಲಸಿಕೆ ವಿತರಣಾ ವ್ಯವಸ್ಥೆಯನ್ನು ರೂಪಿಸಲಾಗುತ್ತಿದೆ. ಆರಂಭಿಕ ಹಂತದಲ್ಲಿ ವೈದ್ಯರು, ವೈದ್ಯಕೀಯ ವಿದ್ಯಾರ್ಥಿಗಳು, ದಾದಿಯರು, ಆಶಾ ಕಾರ್ಯಕರ್ತೆಯರು ಸೇರಿ ಸುಮಾರು ಒಂದು ಕೋಟಿ ಆರೋಗ್ಯ ಸೇವಾ ಸಿಬ್ಬಂದಿಗೆ ಲಸಿಕೆ ನೀಡಲಾಗುತ್ತದೆ. ಇವರೊಂದಿಗೆ ಪುರಸಭೆ ಕಾರ್ಮಿಕರು, ಪೊಲೀಸರು, ಸಶಸ್ತ್ರ ಪಡೆ ಸಿಬ್ಬಂದಿ ಸೇರಿದಂತೆ 2 ಕೋಟಿ ಮುಂಚೂಣಿ ಕಾರ್ಮಿಕರು ಅಲ್ಲದೇ, ಅಗತ್ಯವಿರುವ ಸುಮಾರು 25 ಕೋಟಿ ಜನರಿಗೆ ಲಸಿಕೆ ನೀಡಲಿದ್ದು, ನಂತರದ ಹಂತದಲ್ಲಿ ಎಲ್ಲರಿಗೂ ಲಸಿಕೆ ನೀಡಲಾಗುವುದು ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...