
ಈ ಜಗಳ ವಿಡಿಯೋದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಪ್ರತಿಭಟನಾಕಾರರು ಮತ್ತು ಅಧಿಕಾರಿಗಳ ನಡುವೆ ಉದ್ವಿಗ್ನತೆ ಹೆಚ್ಚಾಗುತ್ತಿದ್ದಂತೆ ಮಹಿಳೆಯೊಬ್ಬರು ಎಸ್ಡಿಎಂ ಅವರ ಕಾಲರ್ ಹಿಡಿದು ಕಪಾಳಮೋಕ್ಷ ಮಾಡಿದರು.
ಮಾಹಿತಿ ಪ್ರಕಾರ ಪ್ರತಿಭಟನಾಕಾರರಾದ ಪ್ರಜಾಪತಿ ಸಮುದಾಯದವರು, ಒಂದು ವಾರದಿಂದ ಪರಿಶಿಷ್ಟ ಜಾತಿ ಸ್ಥಾನಮಾನ ಮತ್ತು ಜಾತಿ ಪ್ರಮಾಣಪತ್ರವನ್ನು ನೀಡುವಂತೆ ಒತ್ತಾಯಿಸಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.
ಪೊಲೀಸರು ಮತ್ತು ಆಡಳಿತವು ಗುಂಪನ್ನು ಚದುರಿಸಲು ಪ್ರಯತ್ನಿಸಿದಾಗ ಉದ್ವಿಗ್ನತೆ ಹೆಚ್ಚಾಯಿತು. ಗೊಂದಲದ ಸಮಯದಲ್ಲಿ ಎಸ್ಡಿಎಂ ಶರ್ಮಾ ಅವರನ್ನು ಹಿಂಬದಿಯಿಂದ ಮಹಿಳೆಯೊಬ್ಬರು ಹಿಡಿದು ಕಪಾಳಮೋಕ್ಷ ಮಾಡಿದರು.
ಸ್ಥಳದಲ್ಲಿದ್ದ ಎಸ್ ಡಿಒಪಿ ಕಾರ್ಣಿಕ್ ಶ್ರೀವಾಸ್ತವ ಮಧ್ಯ ಪ್ರವೇಶಿಸಿ ಪರಿಸ್ಥಿತಿ ಶಾಂತಗೊಳಿಸಿದರು. ಈ ಬಗ್ಗೆ ಪೊಲೀಸರು ಮತ್ತು ಪುರಸಭೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದು, ಸಂಬಂಧಪಟ್ಟವರ ವಿರುದ್ಧ ಕಠಿಣ ಕ್ರಮ ಜರುಗಿಸುವುದಾಗಿ ಭರವಸೆ ನೀಡಿದ್ದಾರೆ.
ಪ್ರತಿಭಟನಾಕಾರರು ಬಳಸುತ್ತಿದ್ದ ಅಕ್ರಮ ವಿದ್ಯುತ್ ಸಂಪರ್ಕವನ್ನೂ ಅಧಿಕಾರಿಗಳು ಕಡಿತಗೊಳಿಸಿದ್ದಾರೆ. ಇದಕ್ಕೆ ಕಾರಣರಾದವರನ್ನು ಗುರುತಿಸಿ ಶೀಘ್ರವೇ ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದು ಎಸ್ಡಿಒಪಿ ತಿಳಿಸಿದ್ದಾರೆ.