alex Certify ಪಡಿತರ ಚೀಟಿದಾರರಿಗೆ ಮತ್ತೊಂದು ಗುಡ್ ನ್ಯೂಸ್ : ಶೀಘ್ರವೇ ಮನೆ ಬಾಗಿಲಿಗೆ `ರೇಷನ್’ ವಿತರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಡಿತರ ಚೀಟಿದಾರರಿಗೆ ಮತ್ತೊಂದು ಗುಡ್ ನ್ಯೂಸ್ : ಶೀಘ್ರವೇ ಮನೆ ಬಾಗಿಲಿಗೆ `ರೇಷನ್’ ವಿತರಣೆ

 

ಮೈಸೂರು  : ಪಡಿತರ ಚೀಟಿದಾರರಿಗೆ ರಾಜ್ಯ ಸರ್ಕಾರವು ಮತ್ತೊಂದು ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಹಿರಿಯ ನಾಗರಿಕರ ಮನೆ ಬಾಗಿಲಿಗೆ ನೇರವಾಗಿ ಪಡಿತರ ತಲುಪಿಸುವ ಅನ್ನ ಸುವಿಧ ಕಾರ್ಯಕ್ರಮ ಜಾರಿಗೊಳಿಸಲಾಗುತ್ತಿದೆ ಎಂದು ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಮೊದಲ ಬಾರಿಗೆ ರಾಜ್ಯದಲ್ಲಿ ನ್ಯಾಯಬೆಲೆ ಅಂಗಡಿಗೆ ಬರಲಾರದ 90 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕ ಮನೆ ಬಾಗಿಲಿಗೆ ನೇರವಾಗಿ ಪಡಿತರ ತಲುಪಿಸುವ ಅನ್ನ ಸುವಿಧ ಕಾರ್ಯಕ್ರಮ ಜಾರಿಗೊಳಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ 4.40 ಕೋಟಿ ಫಲಾನುಭವಿಗಳಿದ್ದಾರೆ. ಈ ಪೈಕಿ 90 ವರ್ಷ ಮೇಲ್ಪಟ್ಟ ಅಂದಾಜು  1 ಲಕ್ಷ ಕುಟುಂಬಗಳನ್ನು ಗುರುತಿಸಲಾಗಿದೆ. ಇವರ ಮನೆಗೆ ನೇರವಾಗಿ ರೇಷನ್ ತಲುಪಿಸಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...