alex Certify BIG NEWS : ಶಿರಸಿಯಲ್ಲಿ ಅಮಾನವೀಯ ಘಟನೆ : ‘ಮಲಗುಂಡಿ’ ಸ್ವಚ್ಛಗೊಳಿಸಲು ಕಾರ್ಮಿಕರ ಬಳಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಶಿರಸಿಯಲ್ಲಿ ಅಮಾನವೀಯ ಘಟನೆ : ‘ಮಲಗುಂಡಿ’ ಸ್ವಚ್ಛಗೊಳಿಸಲು ಕಾರ್ಮಿಕರ ಬಳಕೆ

ಬೆಂಗಳೂರು : ಉತ್ತರ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದ್ದು, ಮಲಗುಂಡಿ ಸ್ವಚ್ಛಗೊಳಿಸಲು ಕಾರ್ಮಿಕರ ಬಳಕೆ ಮಾಡಲಾಗಿದೆ.

ಜಿಲ್ಲೆಯ ಶಿರಸಿಯ ಭಗತ್ ಸಿಂಗ್ ನಗರದಲ್ಲಿ ಜನವರಿ 6 ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಹಳೆಯ ಕಟ್ಟಡದ ಶೌಚಗುಂಡಿ ಸ್ವಚ್ಚಗೊಳಿಸಲು ಇಬ್ಬರು ಕಾರ್ಮಿಕರನ್ನು ಬಳಕೆ ಮಾಡಲಾಗಿದೆ. ಕಾರ್ಮಿಕರು ಮಲ ತುಂಬಿದ್ದ ಬುಟ್ಟಿಯನ್ನು ತಲೆ ಮೇಲೆ ಹೊತ್ತೊಯ್ದು ಗೂಡ್ಸ್ ವಾಹನಕ್ಕೆ ಹಾಕಿದ್ದರು. ಘಟನೆ ನಡೆದು 2 ದಿನವಾದರೂ ನಗರಸಭೆ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ ಎಂಬ ಆರೋಪಗಳು ಕೇಳಿಬಂದಿದೆ.

ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಕ್ಲೀನಿಂಗ್ ನಡೆಸಿದ ಘಟನೆ ಮಾಸುವ ಮುನ್ನವೇ ಮತ್ತೊಂದು ಹೀನ ಘಟನೆ ನಡೆದಿದೆ. ಘಟನೆ ಸಂಬಂಧ ಸರ್ಕಾರ ಈ ಹಿಂದೆ ಎಷ್ಟೇ ಎಚ್ಚರಿಕೆ ನೀಡಿದ್ರೂ ಮತ್ತೆ ಮತ್ತೆ ಇಂತಹ ಘಟನೆಗಳು ವರದಿಯಾಗುತ್ತಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...