alex Certify BIG NEWS: ಶಿರಾಡಿಘಾಟ್ ರಸ್ತೆಯಲ್ಲಿ ಮತ್ತೆ ಭೂಕುಸಿತ; ಅಧಿಕಾರಿಗಳ ವಿರುದ್ಧ ಸ್ಥಳೀಯರ ಆಕ್ರೋಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಶಿರಾಡಿಘಾಟ್ ರಸ್ತೆಯಲ್ಲಿ ಮತ್ತೆ ಭೂಕುಸಿತ; ಅಧಿಕಾರಿಗಳ ವಿರುದ್ಧ ಸ್ಥಳೀಯರ ಆಕ್ರೋಶ

ಹಾಸನ: ವರುಣಾರ್ಭಟದ ನಡುವೆಯೇ ಶಿರಾಡಿಘಾಟ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಮತ್ತೆ ಭೂಕುಸಿತವುಂಟಾಗಿದ್ದು, ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ಸಾಗುವ ಸ್ಥಿತಿ ನಿರ್ಮಾಣವಾಗಿದೆ.

ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ದೋಣಿಗಾಲ್ ಬಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಶಿರಾಡಿಘಾಟ್ ನಲ್ಲಿ ಭೂಕುಸಿತವಾಗಿದ್ದು, ರಸ್ತೆ ಬಿರುಕು ಬಿಟ್ಟಿದೆ. ತಡೆಗೋಡೆಗಳ ಮೇಲೆ ಮಣ್ಣು ಕುಸಿಯುತ್ತಿದೆ. ವಿದ್ಯುತ್ ಕಂಬಗಳು ನೆಲಕ್ಕುರುಳಿ ಬಿದ್ದಿವೆ.

ಎರಡು ದಿನಗಳಿಂದ ಈ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಶಿರಾಡಿಘಾಟ್ ರಸ್ತೆಯಲ್ಲಿ ಅವ್ಯವಸ್ಥೆಯುಂಟಾಗಿದೆ. ಒಂದೆಡೆ ಭೂಕುಸಿತ, ಇನ್ನೊಂದೆಡೆ ಧರೆಗುರುಳಿದ ವಿದ್ಯುತ್ ಕಂಬಗಳು… ಎನ್ ಹೆಚ್ ಎಐ ಅಧಿಕಾರಿಗಳ ಬೇಜವಾಬ್ದಾರಿಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...