alex Certify ಶೂಟೌಟ್​ ಮತ್ತು ದರೋಡೆ ಪ್ರಕರಣದಲ್ಲಿ ಮತ್ತೊಬ್ಬ ಪ್ರಮುಖ ಆರೋಪಿ ಸೆರೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶೂಟೌಟ್​ ಮತ್ತು ದರೋಡೆ ಪ್ರಕರಣದಲ್ಲಿ ಮತ್ತೊಬ್ಬ ಪ್ರಮುಖ ಆರೋಪಿ ಸೆರೆ

ಅರಮನೆ ನಗರಿಯನ್ನೇ ಬೆಚ್ಚಿ ಬೀಳಿಸಿದ್ದ ಶೂಟೌಟ್​ ಹಾಗೂ ದರೋಡೆ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿಯನ್ನು ಬಂಧಿಸಲಾಗಿದೆ. ದರೋಡೆಕೋರರಿಗೆ ಪಿಸ್ತೂಲ್​ ಮಾರಾಟ ಮಾಡಿದ್ದ ಮುಂಬೈ ಮೂಲದ ವ್ಯಕ್ತಿಯನ್ನು ಪೊಲೀಸರು ಖೆಡ್ಡಾಗೆ ಕೆಡವಿದ್ದಾರೆ.

ಬಂಧಿತ ವ್ಯಕ್ತಿಯನ್ನು ರಾಜನ್​ ಎಂದು ಗುರುತಿಸಲಾಗಿದೆ. ಈತ ದರೋಡೆಕೋರರಿಗೆ 50 ಸಾವಿರ ರೂಪಾಯಿ ಪಿಸ್ತೂಲ್​ ಮಾರಾಟ ಮಾಡಿದ್ದ. ಆಗಸ್ಟ್​ 24ರಂದು ಮೈಸೂರಿನ ವಿದ್ಯಾರಣ್ಯಪುರಂನ ಅಮೃತ್​ ಗೋಲ್ಡ್​ & ಸಿಲ್ವರ್​ ಪ್ಯಾಲೇಸ್​ನಲ್ಲಿ ಈ ಘಟನೆ ನಡೆದಿತ್ತು.

ಏಕಾಏಕಿ ಅಂಗಡಿಗೆ ನುಗ್ಗಿದ್ದ ದರೋಡೆಕೋರರು ಚಿನ್ನದಂಗಡಿಯ ಮಾಲೀಕನಿಗೆ ಚೆನ್ನಾಗಿ ಥಳಿಸಿದ್ದರು. ಮಾತ್ರವಲ್ಲದೇ ಅಂಗಡಿಗೆ ಬಂದಿದ್ದ ಚಂದ್ರು ಎಂಬವರ ಮೇಲೆ ಫೈರಿಂಗ್​ ಮಾಡಿದ್ದರು. ಪರಿಣಾಮ ಚಂದ್ರು ಸ್ಥಳದಲ್ಲೇ ಸಾವಿಗೀಡಾಗಿದ್ದರು. ಚಿನ್ನಾಭರಣ ದೋಚಿ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದರು. ಆದರೆ ಈ ಬೆಚ್ಚಿ ಬೀಳಿಸುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸಂಪೂರ್ಣವಾಗಿ ಸೆರೆಯಾಗಿತ್ತು.

ಈ ಸಂಬಂಧ ತನಿಖೆ ಕೈಗೆತ್ತಿಕ್ಕೊಂಡಿದ್ದ ಪೊಲೀಸರು ಈಗಾಗಲೇ ವಿವಿಧ ರಾಜ್ಯಗಳಲ್ಲಿ 7 ಮಂದಿಯನ್ನು ಬಂಧಿಸಿದ್ದಾರೆ. ಇದೀಗ ಪಿಸ್ತೂಲ್​ ಮಾರಾಟ ಮಾಡಿದವನನ್ನೂ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...