alex Certify SHOCKING : ಹೃದಯಾಘಾತಕ್ಕೆ ರಾಜ್ಯದಲ್ಲಿ ಮತ್ತೋರ್ವ ಬಾಲಕ ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING : ಹೃದಯಾಘಾತಕ್ಕೆ ರಾಜ್ಯದಲ್ಲಿ ಮತ್ತೋರ್ವ ಬಾಲಕ ಬಲಿ

ಉಡುಪಿ : ಆಘಾತಕಾರಿ ಸುದ್ದಿ ಎಂಬಂತೆ ರಾಜ್ಯದಲ್ಲಿ ಮತ್ತೋರ್ವ ವಿದ್ಯಾರ್ಥಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಉಡುಪಿಯಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿಯನ್ನು ಅಫ್ಕಾರ್ (17) ಎಂದು ಗುರುತಿಸಲಾಗಿದೆ. ಪ್ರಥಮ ಪಿಯುಸಿ ಓದುತ್ತಿದ್ದ ಈತನಿಗೆ ಹುಟ್ಟಿನಿಂದಲೂ ಹೃದಯ ಸಂಬಂಧಿ ಕಾಯಿಲೆ ಇತ್ತು ಎನ್ನಲಾಗಿದೆ. ಡಿ.6 ರಂದು ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆದು ಡಿ.18 ರಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದನು. ನಂತರ ಮತ್ತೆ ಮನೆಗೆ ಹೋಗಿದ್ದ ವೇಳೆ ಆರೋಗ್ಯದಲ್ಲಿ ಏರುಪೇರಾಗಿ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

7ನೇ ತರಗತಿ ವಿದ್ಯಾರ್ಥಿನಿ ಸಾವು

7ನೇ ತರಗತಿ ವಿದ್ಯಾರ್ಥಿನಿಯೋರ್ವಳು ಹೃದಯಾಘಾತದಿಂದ ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೆಸವಳಲು ಜೋಗಣ್ಣನಕೆರೆಯಲ್ಲಿ ನಿನ್ನೆ ನಡೆದಿತ್ತು. 13 ವರ್ಷದ ಸೃಷ್ಟಿ ಮೃತ ವಿದ್ಯಾರ್ಥಿನಿ. ಶಾಲೆಗೆ ಹೋಗುತ್ತಿದ್ದಾಗ ವಿದ್ಯಾರ್ಥಿನಿ ಕುಸಿದು ಬಿದ್ದಿದ್ದಾಳೆ. ತಕ್ಷಣ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಮಾರ್ಗಮಧ್ಯೆಯೇ ವಿದ್ಯಾರ್ಥಿನಿ ಮೃತಪಟ್ಟಿದ್ದಳು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...