alex Certify ಹೃದಯಾಘಾತದಿಂದ ಮೃತಪಟ್ಟಿದ್ದ ತಂದೆ ಅಂತ್ಯಕ್ರಿಯೆಯಲ್ಲಿ ಭಾಗಿಯಾದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ7 ಆರೋಪಿ ಅನುಕುಮಾರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೃದಯಾಘಾತದಿಂದ ಮೃತಪಟ್ಟಿದ್ದ ತಂದೆ ಅಂತ್ಯಕ್ರಿಯೆಯಲ್ಲಿ ಭಾಗಿಯಾದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ7 ಆರೋಪಿ ಅನುಕುಮಾರ್

ಚಿತ್ರದುರ್ಗ: ನಟ ದರ್ಶನ್ ಗ್ಯಾಂಗ್ ನಿಂದ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ7 ಆರೋಪಿ ಅನುಕುಮಾರ್ ತಂದೆ ಚಂದ್ರಣ್ಣ ಅವರ ಅಂತ್ಯಕ್ರಿಯೆ ಹೊಳಲ್ಕೆರೆ ರಸ್ತೆಯ ರುದ್ರಭೂಮಿಯಲ್ಲಿ ನೆರವೇರಿದೆ.

ತಂದೆಯ ಅಂತ್ಯಕ್ರಿಯೆಯಲ್ಲಿ ಆರೋಪಿ ಅನುಕುಮಾರ್ ಭಾಗವಹಿಸಿದ್ದರು. ತಂದೆಯ ಅಂತ್ಯಕ್ರಿಯ ವೇಳೆ ಭಾಗವಹಿಸಿದ ಅವರು ಕಣ್ಣೀರು ಹಾಕಿದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಮಗನನ್ನು ಕಂಡು ತಾಯಿ ಕಣ್ಣೀರಿಟ್ಟಿದ್ದು, ಅನುಕುಮಾರ್ ಎಲ್ಲಾ ಬಗೆಹರಿದು ಹೊರಗೆ ಬರುತ್ತೇನೆ ಎಂದು ಸಮಾಧಾನಪಡಿಸಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ7 ಅನುಕುಮಾರ್ ಬಂಧಿತರಾಗಿದ್ದನ್ನು ತಿಳಿದ ಅವರ ತಂದೆ ಚಂದ್ರಣ್ಣ ಆಘಾತಕ್ಕೊಳಗಾಗಿ ಹೃದಯಾಘಾತದಿಂದ ಮೃತಪಟ್ಟಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...