alex Certify ಹೆದರಿಸುವ, ಬೆದರಿಸುವ ಮಾತುಗಳೇನಿದ್ರೂ ನಾಲ್ಕು ಗೋಡೆ ಒಳಗೆ ಇರಬೇಕು : ಕುಮಾರ್ ಬಂಗಾರಪ್ಪ ತಿರುಗೇಟು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೆದರಿಸುವ, ಬೆದರಿಸುವ ಮಾತುಗಳೇನಿದ್ರೂ ನಾಲ್ಕು ಗೋಡೆ ಒಳಗೆ ಇರಬೇಕು : ಕುಮಾರ್ ಬಂಗಾರಪ್ಪ ತಿರುಗೇಟು

ಬೆಂಗಳೂರು : ಹೆದರಿಸುವ, ಬೆದರಿಸುವ ಮಾತುಗಳೇನಿದ್ರೂ ನಾಲ್ಕು ಗೋಡೆ ಒಳಗೆ ಇರಬೇಕು ಎಂದು ಕುಮಾರ್ ಬಂಗಾರಪ್ಪ ವಿರೋಧಿಗಳಿಗೆ ತಿರುಗೇಟು ನೀಡಿದ್ದಾರೆ.

ಹೆದರಿಸುವ, ಬೆದರಿಸುವ, ಹುಷಾರ್ ಅನ್ನುವ ಮಾತುಗಳೇನಿದ್ದರೂ ಗಂಟಲೋಳಗೇ, ನಾಲ್ಕು ಗೋಡೆಗಳೊಳಗೆ, ತಮ್ಮ ಪಟಾಲಂ ಮುಂದೆ ಮಾತ್ರ ಚಾಲ್ತಿಯಲ್ಲಿರಬೇಕು.

ದಿಕ್ಕು ಗೆಟ್ಟು ದಿಕ್ಕಾಪಾಲಾಗಿ ಹೋಗಿ ಬೆಂಗಳೂರು ಸೇರಿಕೊಂಡವರಿಗೆ ಕೊನೆಯ ಎಚ್ಚರಿಕೆ, ನೀವು ಹಿಂತಿರುಗಿ ಬರುವುದು ಕನಸಿನ ಮಾತು.ಜೈಹಿಂದ್, ಜೈ ಕರ್ನಾಟಕ! ಎಂದು ಕುಮಾರ್ ಬಂಗಾರಪ್ಪ ಫೇಸ್ ಬುಕ್ ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.

ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಸ್ಪರ್ಧಿಯಾಗಿ ಗೀತಾ ಶಿವರಾಜ್ ಕುಮಾರ್ ಪತ್ನಿ ಗೀತಾ ಸ್ಪರ್ಧಿಸಿದ್ದರು. ಆದರೆ ತಮ್ಮ ಪ್ರತಿಸ್ಪರ್ಧಿ ಬಿ.ವೈ.ರಾಘವೇಂದ್ರ ಅವರ ವಿರುದ್ದ ಭಾರೀ ಅಂತರದ ಸೋಲು ಅನುಭವಿಸಿದ್ದಾರೆ. ಈ ಹಿನ್ನೆಲೆ ಕುಮಾರ್ ಬಂಗಾರಪ್ಪ ಶಿವಣ್ಣ ನಮ್ಮೂರ ಜಾತ್ರೆಯಲ್ಲಿ ಕುಣಿಯುವ ಕೆಲಸಕ್ಕೆ ಅರ್ಜಿ ಹಾಕಲಿ ಎಂದು ವ್ಯಂಗ್ಯವಾಗಿ ಮಾತನಾಡಿದ್ದರು.ರೊಚ್ಚಿಗೆದ್ದ ಶಿವಣ್ಣನ ಅಭಿಮಾನಿಗಳು ಇಂದು ಸದಾಶಿವನಗರದಲ್ಲಿರುವ ಕುಮಾರ್ ಬಂಗಾರಪ್ಪ ನಿವಾಸಕ್ಕೆ ಮುತ್ತಿಗೆ ಹಾಕಿ ಕ್ಷಮೆಯಾಚನೆಗೆ ಪಟ್ಟು ಹಿಡಿದಿದ್ದಾರೆ.

 

 

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...