alex Certify BIG NEWS: BPL ಗೆ 1.50 ಲಕ್ಷ ರೂ. ನೀಡಿದಂತೆ ಎಪಿಎಲ್ ಗೂ ಪರಿಹಾರಕ್ಕೆ ಚಿಂತನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: BPL ಗೆ 1.50 ಲಕ್ಷ ರೂ. ನೀಡಿದಂತೆ ಎಪಿಎಲ್ ಗೂ ಪರಿಹಾರಕ್ಕೆ ಚಿಂತನೆ

ಬೆಂಗಳೂರು: ಕೋವಿಡ್ ನಿಂದ ಮೃತಪಟ್ಟ ಬಿಪಿಎಲ್ ಮತ್ತು ಎಪಿಎಲ್ ಕುಟುಂಬದವರಿಗೆ ಕೇಂದ್ರ ಸರ್ಕಾರ ತಲಾ 50 ಸಾವಿರ ರೂ. ಪರಿಹಾರ ನೀಡುತ್ತಿದೆ. ರಾಜ್ಯ ಸರ್ಕಾರ ಬಿಪಿಎಲ್ ಕುಟುಂಬಕ್ಕೆ 1 ಲಕ್ಷ ರೂ ಸೇರಿಸಿ ಒಟ್ಟು 1.50 ಲಕ್ಷ ರೂ. ನೀಡುತ್ತಿದ್ದು, ಎಪಿಎಲ್ ಕುಟುಂಬಕ್ಕೂ ಈ ಪರಿಹಾರ ಮೊತ್ತ ನೀಡಬೇಕೆಂದು ಶಾಸಕ ಜಮೀರ್ ಅಹಮ್ಮದ್ ಮನವಿ ಮಾಡಿದ್ದಾರೆ.

ಇದಕ್ಕೆ ಸ್ಪಂದಿಸಿದ ಸಿಎಂ ಬಸವರಾಜ ಬೊಮ್ಮಾಯಿ ಕೋವಿಡ್ ನಿಂದ ಮೃತಪಟ್ಟ ಎಪಿಎಲ್ ಕುಟುಂಬದವರಿಗೂ ಒಂದು ಲಕ್ಷ ರೂಪಾಯಿ ಪರಿಹಾರ ನೀಡುವ ಚಿಂತನೆ ಇದೆ ಎಂದು ಹೇಳಿದ್ದಾರೆ.

ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಕೊರೋನಾದಿಂದ ಮೃತಪಟ್ಟವರ ಕುಟುಂಬದವರಿಗೆ ಪರಿಹಾರ ವಿತರಿಸಿ ಅವರು ಮಾತನಾಡಿದರು. ರಾಜ್ಯ ಸರ್ಕಾರ ಕೊರೊನಾದಿಂದ ಮೃತಪಟ್ಟ ಬಿಪಿಎಲ್ ಕುಟುಂಬದವರಿಗೆ ಒಂದು ಲಕ್ಷ ರೂಪಾಯಿ ಪರಿಹಾರ ಧನ ನೀಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಎಪಿಎಲ್ ನವರಿಗೂ ಪರಿಹಾರ ನೀಡಲು ಚಿಂತನೆ ನಡೆಸಲಾಗುವುದು ಎಂದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...