alex Certify Gruha Jyoti Scheme : ರಾಜ್ಯದ ಜನತೆಗೆ ಮುಖ್ಯ ಮಾಹಿತಿ : ಉಚಿತ ವಿದ್ಯುತ್ ಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಜೂ.18 ರಿಂದ ಆರಂಭ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Gruha Jyoti Scheme : ರಾಜ್ಯದ ಜನತೆಗೆ ಮುಖ್ಯ ಮಾಹಿತಿ : ಉಚಿತ ವಿದ್ಯುತ್ ಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಜೂ.18 ರಿಂದ ಆರಂಭ

ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವದ ಯೋಜನೆಯಲ್ಲಿ ಒಂದಾದ ಗೃಹಜ್ಯೋತಿ ಯೋಜನೆಗೆ ನಾಳೆಯಿಂದಲೇ ( ಜೂನ್ 15) ಅರ್ಜಿ ಸಲ್ಲಿಸಬಹುದಾಗಿದೆ ಎಂದು ಹೇಳಲಾಗಿತ್ತು.ಆದರೆ ಇದೀಗ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಜೂನ್ 18ಕ್ಕೆ ಮುಂದೂಡಲಾಗಿದೆ.

ತಾಂತ್ರಿಕ ದೋಷ ಹಿನ್ನೆಲೆ ಜೂನ್ 18 ಕ್ಕೆ ಗೃಹಜ್ಯೋತಿ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಮುಂದೂಡಲಾಗಿದೆ. ಜೂನ್ 18 ರಿಂದ ರಾಜ್ಯದ ಜನರು ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ. ಮಾಸಿಕ 200 ಯೂನಿಟ್ ಒಳಗಿನ ವಿದ್ಯುತ್ ಬಳಕೆ ಮಾಡುವವರು ಅರ್ಜಿ ಸಲ್ಲಿಸಬಹುದಾಗಿದೆ.ರಾಜ್ಯದಲ್ಲಿ 2.14 ಕೋಟಿ ಜನರು ಇದರ ಪ್ರಯೋಜನ ಪಡೆಯಲಿದ್ದಾರೆ. ಅರ್ಜಿ ಸಲ್ಲಿಸುವವರು ಆರ್ ಆರ್ ನಂಬರ್ ಜೊತೆ ಆಧಾರ್ ನಂಬರ್ ಕಡ್ಡಾಯವಾಗಿ ನಮೂದಿಸಬೇಕು. ಬಾಡಿಗೆ ಮನೆಯಲ್ಲಿರುವವರಿಗೆ ಮನೆ ಕರಾರು ಪತ್ರ ಅಥವಾ ವೋಟರ್ ಐಡಿ ಕಡ್ಡಾಯವಾಗಿದೆ.
ಗೃಹಜ್ಯೋತಿ ಯೋಜನೆಯಡಿ ಎಲ್ಲರಿಗೂ 200 ಯೂನಿಟ್ ಉಚಿತ ವಿದ್ಯುತ್ ನೀಡಲಾಗುತ್ತದೆ. ಇದು ಸ್ವಂತ ಮನೆ ಹಾಗೂ ಬಾಡಿಗೆದಾರರಿಗೂ ಅನ್ವಯವಾಗಲಿದ್ದು, ಫ್ರೀ ವಿದ್ಯುತ್ ಗೆ ದಾಖಲೆಗಳನ್ನು ಸಲ್ಲಿಸಬೇಕು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದರು. ಗೃಹಜ್ಯೋತಿ ಯೋಜನೆ ಹೆಸರಿನಲ್ಲಿಯೇ ಬೆಸ್ಕಾಂ ಹೆಡ್ ಆಫೀಸ್ ನಲ್ಲಿ ಆಪ್ ಸಿದ್ಧವಾಗುತ್ತಿದೆ. ಸ್ಮಾರ್ಟ್ ಫೋನ್ ಗಳಲ್ಲಿಯೂ ಗೃಹಜ್ಯೋತಿ ಆಪ್ ಲಭ್ಯವಾಗಲಿದೆ ಎಂದು ಹೇಳಿದ್ದರು.
ಎಲ್ಲಾ ಆಪ್ ಗಳಂತೆ ಪ್ಲೇ ಸ್ಟೋರ್, ಆಪಲ್ ಸ್ಟೋರ್ ಗಳಲ್ಲಿಯೂ ಗೃಹಜ್ಯೋತಿ ಆಪ್ ಲಭ್ಯವಿರಲಿದ್ದು, ಅಪ್ಲಿಕೇಷನ್ ಡೌನ್ ಲೋಡ್ ಮಾಡಿಕೊಂಡು ಅರ್ಜಿ ತುಂಬಬೇಕು. ಆಧಾರ್ ಕಾರ್ಡ್, ಆರ್.ಆರ್. ನಂಬರ್ ಗೆ ಲಿಂಕ್ ಆಗಬೇಕು. ಸ್ವಂತ ಮನೆ ಇರಲಿ, ಬಾಡಿಗೆ ಮನೆಯಿರಲಿ ಕರಾರು ಪತ್ರದ ದಾಖಲೆ ಇರಬೇಕು. ಬಾಡಿಗೆದಾರು ಕರಾರು ಪತ್ರ ಇಲ್ಲದಿದ್ದರೆ ವೋಟರ್ ಐಡಿ ಪ್ರತಿ ಸಲ್ಲಿಸಬೇಕು. ಸೇವಾ ಸಿಂಧು ಆಪ್ ಮೂಲಕವೂ ಅರ್ಜಿ ಸಲ್ಲಿಸಬಹುದಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...