ಕೊಪ್ಪಳ : ಅಕ್ರಮ ಮರಳು ದಂಧೆ ವಿರುದ್ಧ ಇಂದೇ ಸೂಕ್ತಕ್ರಮ ಕೈಗೊಳ್ಳುತ್ತೇವೆ ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಹೇಳಿದರು.
ಇಂದು ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ಶಿವರಾಜ್ ತಂಗಡಗಿ ಮರಳು ದಂಧೆ ವಿರುದ್ಧ ಇಂದೇ ಸೂಕ್ರ ಕ್ರಮ ಕೈಗೊಳ್ಳುತ್ತೇವೆ, ನಾವು ಯಾರಿಗೂ ಬೆಂಬಲ ನೀಡಲ್ಲ, ಇಂದೇ ಸೂಕ್ರ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.
ಜೇವರ್ಗಿ ತಾಲೂಕು ನೆಲೋಗಿ ಪೊಲೀಸ್ ಠಾಣಾ ವ್ಯಾಪ್ತಿಯ ಹುಲ್ಲೂರು ಚೆಕ್ ಪೋಸ್ಟ್ ಬಳಿ ಕರ್ತವ್ಯನಿರತ ಪೊಲೀಸ್ ಪೇದೆಯೊಬ್ಬರು ಅಕ್ರಮ ಮರುಳುಸಾಗಾಣಿಕೆ ಮಾಡುತ್ತಿದ್ದ ಟ್ರಾಕ್ಟರ್ ಹರಿದು ಸಾವನ್ನಪ್ಪಿದ್ದರು. ಘಟನೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.