alex Certify BIG NEWS: ಲಸಿಕೆಗೆ ಗ್ರೀನ್ ಸಿಗ್ನಲ್ ನೀಡಿದ ಬೆನ್ನಲ್ಲೇ ಆಕ್ಷೇಪ – ಆತುರದ ನಿರ್ಧಾರ ಅಪಾಯಕಾರಿ; ತರೂರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಲಸಿಕೆಗೆ ಗ್ರೀನ್ ಸಿಗ್ನಲ್ ನೀಡಿದ ಬೆನ್ನಲ್ಲೇ ಆಕ್ಷೇಪ – ಆತುರದ ನಿರ್ಧಾರ ಅಪಾಯಕಾರಿ; ತರೂರ್

ನವದೆಹಲಿ: ಕೋವಿಡ್ ಲಸಿಕೆಗೆ ಗ್ರೀನ್ ಸಿಗ್ನಲ್ ನೀಡಿದ ದಿನವೇ ಆಕ್ಷೇಪ ಕೇಳಿಬಂದಿದೆ. ವ್ಯಾಕ್ಸಿನ್ ಬಗ್ಗೆ ಕಾಂಗ್ರೆಸ್ ನಾಯಕ ಶಶಿ ತರೂರ್ ಅವರಿಂದ ಆಕ್ಷೇಪ ವ್ಯಕ್ತವಾಗಿದೆ.

ಲಸಿಕೆ ಬಳಕೆಗೆ ಅನುಮತಿ ನೀಡಿರುವುದು ಆತುರದ ನಿರ್ಧಾರವೆಂದು ಸಂಸದ ಶಶಿತರೂರ್ ಆತಂಕ ವ್ಯಕ್ತಪಡಿಸಿದ್ದಾರೆ. ಕೊವ್ಯಾಕ್ಸಿನ್ ಲಸಿಕೆ ಬಳಕೆಗೆ ಅನುಮತಿ ನೀಡಲಾಗಿದ್ದು, ಇದೊಂದು ಆತುರದ ನಿರ್ಧಾರ, ಆ ಲಸಿಕೆ ಇನ್ನೂ ಪ್ರಯೋಗದ ಹಂತದಲ್ಲಿದೆ. ಪ್ರಯೋಗ ಪೂರ್ಣವಾಗುವ ಮೊದಲೇ ಅನುಮತಿ ನೀಡಲಾಗಿದೆ ಎಂದು ದೂರಿದ್ದಾರೆ.

ಕೊವಾಕ್ಸಿನ್ ಗೆ ತುರ್ತು ಅನುಮೋದನೆ ಅಪಾಯಕಾರಿ. ಲಸಿಕೆಯ ಸಂಪೂರ್ಣ ಪ್ರಯೋಗಗಳು ಪೂರ್ಣಗೊಳ್ಳುವವರೆಗೆ ಕಾಯಬೇಕೆಂದು ಒತ್ತಾಯಿಸಿದ್ದಾರೆ. ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಸ್ಪಷ್ಟನೆ ನೀಡಬೇಕು. ಪೂರ್ಣ ಪ್ರಯೋಗಗಳು ಮುಗಿಯುವವರೆಗೆ ಇದರ ಬಳಕೆಯನ್ನು ನಿಲ್ಲಿಸಬೇಕು. ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...