alex Certify ಗೃಹ ಸಚಿವ ಆರಗ ಜ್ಞಾನೇಂದ್ರ ಹೆಸರಲ್ಲಿ ಭಾರಿ ವಂಚನೆ, ಬಿಜೆಪಿ ಮುಖಂಡ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗೃಹ ಸಚಿವ ಆರಗ ಜ್ಞಾನೇಂದ್ರ ಹೆಸರಲ್ಲಿ ಭಾರಿ ವಂಚನೆ, ಬಿಜೆಪಿ ಮುಖಂಡ ಅರೆಸ್ಟ್

ಬೆಂಗಳೂರು: ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಹೆಸರಲ್ಲಿ ಕೋಟ್ಯಂತರ ರೂ. ವಂಚನೆ ಮಾಡಿದ ಬಿಜೆಪಿ ಮುಖಂಡನನ್ನು ಸಿಸಿಬಿ ಪೊಲೀಸರು ಮತ್ತು ಕಬ್ಬನ್ ಪಾರ್ಕ್ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ಶಿವಮೊಗ್ಗದ ಭವಾನಿ ಬಂಧಿತ ಆರೋಪಿ. ಬೆಂಗಳೂರಿನ ವಿಜಯನಗರ ನಿವಾಸಿ ಸುರೇಶ್ ಎಂಬುವರಿಗೆ 25 ಲಕ್ಷ ರೂ. ವಂಚಿಸಿದ ಪ್ರಕರಣದಲ್ಲಿ ಆತನನ್ನು ಬಂಧಿಸಲಾಗಿದೆ.

ಕರ್ನಾಟಕ ಬಾರ್ ಅಂಡ್ ರೆಸ್ಟೋರೆಂಟ್ ಓನರ್ಸ್ ವುಮನ್ ಎಂಪ್ಲಾಯೀಸ್ ಸರ್ವಿಸ್ ಅಸೋಸಿಯೇಷನ್ ಜಂಟಿ ಕಾರ್ಯದರ್ಶಿ ಸುರೇಶ್ ಅವರನ್ನು ಸಂಪರ್ಕಿಸಿದ ಆರೋಪಿ ಲೇಡಿಸ್ ಸರ್ವಿಸ್ ಬಾರ್ ಗಳನ್ನು ಮುಚ್ಚದಿರುವುದು ಮತ್ತು ಬಾರ್ ಮಾಲೀಕರಿಗೆ ಪೊಲೀಸರಿಂದ ತೊಂದರೆಯಾಗದಂತೆ ನೋಡಿಕೊಳ್ಳಲು 1.25 ಕೋಟಿ ರೂಪಾಯಿ ಬೇಡಿಕೆ ಇಟ್ಟು ಹಣ ಪಡೆದುಕೊಂಡಿದ್ದ. ತಾನು ಸಚಿವರು, ಬಿಜೆಪಿ ನಾಯಕರೊಂದಿಗೆ ತೆಗೆಸಿಕೊಂಡಿದ್ದ ಫೋಟೋಗಳನ್ನು ತೋರಿಸಿ ನಂಬಿಸಿದ್ದ. ಅಸೋಸಿಯೇಷನ್ 44 ಮಂದಿ ಸದಸ್ಯರು 1.25 ಕೋಟಿ ರೂ. ಕೊಟ್ಟಿದ್ದರು.

ಬಳಿಕ ವರಸೆ ಬದಲಿಸಿದ್ದ ಆರೋಪಿ 1 ಕೋಟಿ ವಾಪಸ್ ನೀಡಿ ಉಳಿದ ಹಣ ಕೊಡಲು ನಿರಾಕರಿಸಿ ಬೆದರಿಕೆ ಹಾಕಿದ್ದಾನೆ. ದೂರು ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಈತ ಇದೇ ರೀತಿ ಹಲವರಿಗೆ ವಂಚಿಸಿದ್ದಾನೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...