alex Certify BREAKING: ಶಾಲಾ, ಕಾಲೇಜ್ ಗಳಿಗೆ ರಜೆ ಮುಂದುವರೆಸುವ ಬಗ್ಗೆ ಸಿಎಂ ನೇತೃತ್ವದ ಸಭೆ ಬಳಿಕ ತೀರ್ಮಾನ; ಆರಗ ಜ್ಞಾನೇಂದ್ರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಶಾಲಾ, ಕಾಲೇಜ್ ಗಳಿಗೆ ರಜೆ ಮುಂದುವರೆಸುವ ಬಗ್ಗೆ ಸಿಎಂ ನೇತೃತ್ವದ ಸಭೆ ಬಳಿಕ ತೀರ್ಮಾನ; ಆರಗ ಜ್ಞಾನೇಂದ್ರ

ಬೆಂಗಳೂರು: ಶಾಲಾ, ಕಾಲೇಜುಗಳಿಗೆ ರಜೆ ಮುಂದುವರೆಸುವ ನಿರ್ಧಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಬೆಂಗಳೂರಿನಲ್ಲಿ ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಸಿಎಂ, ನಾನು, ಶಿಕ್ಷಣ ಸಚಿವರು ಸೇರಿ ಇದರ ಬಗ್ಗೆ ತೀರ್ಮಾನಿಸುತ್ತೇವೆ. ರಾಜ್ಯದಲ್ಲಿ ಶಾಲೆ, ಕಾಲೇಜ್ ಗಳಿಗೆ ರಜೆ ಮುಂದುವರಿಸಬೇಕೇ ಬೇಡವೇ ಎಂಬುದರ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇವೆ. ಹೈಕೋರ್ಟ್ ಯಾವ ಆದೇಶ ನೀಡುತ್ತದೆ ಎಂಬುದನ್ನು ಕಾದು ನೋಡುತ್ತೇವೆ ಎಂದು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಯಾವುದೇ ಸಮಸ್ಯೆ ಆಗಿಲ್ಲ. ಆದರೂ, ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಕಾಲೇಜು ಬಳಿ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಹೆಚ್ಚಿನ ಭದ್ರತೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಶಾಂತಿಯುತವಾಗಿದೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...