alex Certify ಮುಂದಿನ ಚುನಾವಣೆಯಲ್ಲಿ ಜನ ಕಾಂಗ್ರೆಸ್ ಪಕ್ಷದ ಆಕ್ಸಿಜನ್ ಕಿತ್ತು ಹಾಕ್ತಾರೆ: ಆರಗ ಜ್ಞಾನೇಂದ್ರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮುಂದಿನ ಚುನಾವಣೆಯಲ್ಲಿ ಜನ ಕಾಂಗ್ರೆಸ್ ಪಕ್ಷದ ಆಕ್ಸಿಜನ್ ಕಿತ್ತು ಹಾಕ್ತಾರೆ: ಆರಗ ಜ್ಞಾನೇಂದ್ರ

ಬೆಂಗಳೂರು: ಹಿಜಾಬ್ ಕುರಿತಾಗಿ ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ ಅವರು ನೀಡಿದ ಹೇಳಿಕೆಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದು, ಕಾಂಗ್ರೆಸ್ ಪಕ್ಷದವರು ಸಮವಸ್ತ್ರವನ್ನು ವಿರೋಧ ಮಾಡುತ್ತಾರೆ. ಹಿಜಾಬ್ ಸ್ವಾಗತಿಸುತ್ತಾರೆ. ಬಹಳ ವರ್ಷಗಳಿಂದ ಕಾಂಗ್ರೆಸ್ ಇದನ್ನೇ ಮಾಡಿಕೊಂಡು ಬಂದಿದೆ ಎಂದು ಟೀಕಿಸಿದ್ದಾರೆ.

ಕಾಂಗ್ರೆಸ್ ಪಕ್ಷಕ್ಕೆ ದೇಶದ ಜನರು ಜಾಗ ತೋರಿಸುತ್ತಿದ್ದಾರೆ. ಸತ್ಯ ಹೇಳುವುದಕ್ಕೆ ಕಾಂಗ್ರೆಸ್ ಪಕ್ಷದವರು ತಯಾರಾಗಿಲ್ಲ. ನಿಷ್ಠುರವಾಗಿ ಮಾತನಾಡೋಕೆ ಕಾಂಗ್ರೆಸ್ ನವರು ತಯಾರಾಗಿಲ್ಲ. ವೋಟ್ ಬ್ಯಾಂಕ್ ರಾಜಕಾರಣದ ಆಟ ಬಹಳ ದಿನ ನಡೆಯುವುದಿಲ್ಲ. ಪಂಚರಾಜ್ಯಗಳ ಚುನಾವಣೆ ಕಾಂಗ್ರೆಸ್ ಪಕ್ಷಕ್ಕೆ ಪಾಠ ಕಲಿಸಿದೆ. ದೇಶದಲ್ಲಿ ಕಾಂಗ್ರೆಸ್ ಪಕ್ಷ ಎಲ್ಲಿದೆ ಎಂದು ಹುಡುಕಬೇಕಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಆಕ್ಸಿಜನ್ ಕೊಟ್ಟ ರೀತಿ ಇದೆ. ಮುಂದಿನ ಚುನಾವಣೆಯಲ್ಲಿ ಜನರು ಅದನ್ನೂ ಕಿತ್ತು ಹಾಕುತ್ತಾರೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...