alex Certify ಅಡಿಕೆಗೆ ಎಲೆ ಚುಕ್ಕೆ ರೋಗ: ರೈತರಿಗೆ ಪರಿಹಾರ ಸೇರಿ ವಿವಿಧ ಬೇಡಿಕೆ ಬಗ್ಗೆ ಕೇಂದ್ರದ ಗಮನ ಸೆಳೆಯಲು ದೆಹಲಿಗೆ ನಿಯೋಗ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಡಿಕೆಗೆ ಎಲೆ ಚುಕ್ಕೆ ರೋಗ: ರೈತರಿಗೆ ಪರಿಹಾರ ಸೇರಿ ವಿವಿಧ ಬೇಡಿಕೆ ಬಗ್ಗೆ ಕೇಂದ್ರದ ಗಮನ ಸೆಳೆಯಲು ದೆಹಲಿಗೆ ನಿಯೋಗ

ಬೆಂಗಳೂರು: ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕರಾವಳಿ ಭಾಗದಲ್ಲಿ ರೈತ ಸಮುದಾಯದ ಜೀವನಾಡಿಯದ ಅಡಿಕೆ ಬೆಳೆ ಎಲೆ ಚುಕ್ಕೆ ರೋಗದಿಂದ ನಲುಗಿದ್ದು, ನಿಯಂತ್ರಣ ಬಗ್ಗೆ ಕೇಂದ್ರ ಸರ್ಕಾರದ ಗಮನ ಸೆಳೆಯಲು ನಾಳೆ ದೆಹಲಿಗೆ ನಿಯೋಗವೊಂದನ್ನು ಕರೆದೊಯ್ಯಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಎಲೆ ಚುಕ್ಕೆ ರೋಗ ಇಡೀ ಮಲೆನಾಡು ಭಾಗದ ಅಡಿಕೆ ತೋಟಗಳಲ್ಲಿ ವ್ಯಾಪಕವಾಗಿ ಹಬ್ಬಿದ್ದು, ಅಡಿಕೆ ಬೆಳೆ ಸಂಪೂರ್ಣವಾಗಿ ನಾಶವಾಗುವ ಅಪಾಯಕ್ಕೆ ತುತ್ತಾಗಿದೆ. ಅಡಿಕೆ ಬೆಳೆಯನ್ನು ಉಳಿಸಿ ಬೆಳೆಗಾರರ ರಕ್ಷಣೆಗೆ ಬರಬೇಕಾದ ತುರ್ತು ಅಗತ್ಯವಿದ್ದು, ತಕ್ಷಣ ಪರಿಹಾರ ಕಂಡು ಕೊಳ್ಳುವ ನಿಟ್ಟಿನಲ್ಲಿ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹಾಗೂ ಇತರರನ್ನು ಭೇಟಿಯಾಗಿ ಚರ್ಚಿಸಲಾಗುವುದು ಎಂದು ತಿಳಿಸಿದರು.

ಎಲೆ ಚುಕ್ಕೆ ರೋಗದ ನಿಯಂತ್ರಣ ಬಗ್ಗೆ ಸಂಶೋಧನೆ, ರೈತರಿಗೆ ಪರಿಹಾರ ಹಾಗೂ ಇತರ ಮಾರ್ಗೋಪಾಯಗಳನ್ನು ಕಂಡುಕೊಳ್ಳುವ ಬಗ್ಗೆಯೂ, ಚರ್ಚಿಸಲಾಗುವುದು ಎಂದು ತಿಳಿಸಿದರು.

ಸಂಸದ ಬಿ.ವೈ. ರಾಘವೇಂದ್ರ, ಶಾಸಕ ಹರತಾಳು ಹಾಲಪ್ಪ, ಸೊರಬ ಮಂಜಪ್ಪ ಹಾಗೂ ಇತರ ಗಣ್ಯರು ನಿಯೋಗದಲ್ಲಿ ತೆರಳಲಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...