alex Certify ರವೀಂದ್ರ ಕಲಾಕ್ಷೇತ್ರದಲ್ಲಿ ದ್ವಾರಕೀಶ್ ಅಂತಿಮ ದರ್ಶನಕ್ಕೆ ವ್ಯವಸ್ಥೆ: ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರವೀಂದ್ರ ಕಲಾಕ್ಷೇತ್ರದಲ್ಲಿ ದ್ವಾರಕೀಶ್ ಅಂತಿಮ ದರ್ಶನಕ್ಕೆ ವ್ಯವಸ್ಥೆ: ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ

ಬೆಂಗಳೂರು: ಹೃದಯಾಘಾತದಿಂದ ನಿಧನರಾದ ಹಿರಿಯ ನಟ ದ್ವಾರಕೀಶ್ ಅವರ ಅಂತಿಮ ದರ್ಶನಕ್ಕೆ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ವ್ಯವಸ್ಥೆ ಮಾಡಲಾಗಿದೆ.

ಬೆಳಗ್ಗೆ ಅವರ ನಿವಾಸದಲ್ಲಿ ಫಾರ್ಥಿವ ಶರೀರಕ್ಕೆ ಅಂತಿಮ ವಿಧಿ ವಿಧಾನ ನೆರವೇರಿಸಿ ಪೂಜೆ ಸಲ್ಲಿಸಲಾಗುವುದು. ನಂತರ ಬೆಳಗ್ಗೆ 7:30 ರಿಂದ ಪಾರ್ಥಿವ ಶರೀರವನ್ನು ರವೀಂದ್ರ ಕಲಾಕ್ಷೇತ್ರಕ್ಕೆ ಸ್ಥಳಾಂತರ ಮಾಡಲಾಗುವುದು. ಹುಸ್ಕೂರು ರಸ್ತೆ, ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ಮೂಲಕ ಸೇಂಟ್ ಜಾನ್ಸ್ ಆಸ್ಪತ್ರೆ ಸರ್ಕಲ್, ಡೈರಿ ಸರ್ಕಲ್, ಮಿನರ್ವ ಸರ್ಕಲ್, ಜೆ.ಸಿ. ರೋಡ್ ಮೂಲಕ ರವೀಂದ್ರ ಕಲಾಕ್ಷೇತ್ರಕ್ಕೆ ಪಾರ್ಥಿವ ಶರೀರ ತಲುಪಲಿದೆ.

ರಾಜಕೀಯ, ಚಿತ್ರರಂಗದ ಗಣ್ಯರು ಅಂತಿಮ ದರ್ಶನ ಪಡೆಯಲಿದ್ದಾರೆ. ಅಭಿಮಾನಿಗಳು, ಕಲಾವಿದರು ಸಾರ್ವಜನಿಕರಿಗೆ ಅಂತಿಮ ದರ್ಶನ ಪಡೆಯಲು ವ್ಯವಸ್ಥೆ ಮಾಡಲಾಗಿದೆ. ನಂತರ ಬೆಂಗಳೂರಿನ ಚಾಮರಾಜಪೇಟೆ ರುದ್ರ ಭೂಮಿಯಲ್ಲಿ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...