alex Certify ಯುವತಿಯರಿಗೆ ಕಿರುಕುಳ ನೀಡಿ ವಿಕೃತಿ ಮೆರೆಯುತ್ತಿದ್ದ ಆರೋಪಿ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಯುವತಿಯರಿಗೆ ಕಿರುಕುಳ ನೀಡಿ ವಿಕೃತಿ ಮೆರೆಯುತ್ತಿದ್ದ ಆರೋಪಿ ಅರೆಸ್ಟ್

ಬೆಂಗಳೂರು: ಬೈಕ್ ನಲ್ಲಿ ತೆರಳಿ ಯುವತಿಯರಿಗೆ ಕಿರುಕುಳ ನೀಡುತ್ತಿದ್ದ ಆರೋಪಿಯನ್ನು ಕೋರಮಂಗಲ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕೆಜಿಎಫ್ ರಾಬರ್ಟ್ ಸನ್ ಪೇಟೆಯ ಅರುಣ್ ಕುಮಾರ್(32) ಬಂಧಿತ ಆರೋಪಿ. ಈತ ಕೋರಮಂಗಲದ ಮೇಸ್ತ್ರಿಪಾಳ್ಯದಲ್ಲಿರುವ ತನ್ನ ಚಿಕ್ಕಪ್ಪನ ಮನೆಯಲ್ಲಿ ವಾಸವಾಗಿದ್ದ. ಈತನ ಸಹೋದರ ಕಂಪನಿಯೊಂದರಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದಾನೆ. ಲಾಕ್ಡೌನ್ ಕಾರಣದಿಂದ ಆರ್ಡರ್ ಗಗಳು ಹೆಚ್ಚಾಗಿದ್ದರಿಂದ ಅರುಣ್ ಕುಮಾರ್ ಕೂಡ ಡೆಲಿವರಿ ಕೆಲಸ ಮಾಡುತ್ತಿದ್ದ.

ಒಂದೇ ಐಡಿ ಕಾರ್ಡ್ ನಲ್ಲಿ ಇಬ್ಬರೂ ಫುಡ್ ಡೆಲಿವರಿ ಮಾಡುತ್ತಿದ್ದರು. ಮೇ 31 ರಂದು ರಾತ್ರಿ ಕೋರಮಂಗಲ ನಾಲ್ಕನೇ ಹಂತದಲ್ಲಿ ನಡೆದುಕೊಂಡು ಹೋಗುತ್ತಿದ್ದ ಉತ್ತರ ಭಾರತದ ಮೂಲದ ಯುವತಿಯ ಹಿಂಭಾಗಕ್ಕೆ ಹೊಡೆದು ಅರುಣ್ ಪರಾರಿಯಾಗಿದ್ದು, ಯುವತಿ ಪೊಲೀಸರಿಗೆ ಮಾಹಿತಿ ನೀಡಿದ್ದಾಳೆ.

ಪೊಲೀಸರು ಸಿಸಿ ಕ್ಯಾಮೆರಾ ಪರಿಶೀಲಿಸಿ ಬೈಕ್ ನಂಬರ್ ಆಧರಿಸಿ ಅರುಣ್ ಸಹೋದರನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಆತನ ಮಾಹಿತಿ ಮೇರೆಗೆ ಅರುಣ್ ಕುಮಾರ್ ನನ್ನು ಬಂಧಿಸಿದ್ದಾರೆ. ಸೈಕೋ ರೀತಿ ವರ್ತಿಸುತ್ತಿದ್ದ ಅರುಣ್ ಕುಮಾರ್ ಒಂದು ತಿಂಗಳಲ್ಲಿ ನಾಲ್ವರು ಯುವತಿಯರಿಗೆ ಈ ರೀತಿ ಹಿಂಭಾಗಕ್ಕೆ ಹೊಡೆದು ವಿಕೃತಿ ಮೆರೆದಿದ್ದಾನೆ ಎನ್ನಲಾಗಿದ್ದು, ಪೊಲೀಸರು ಮುಂದಿನ ಕ್ರಮಕೈಗೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...