alex Certify ಬಿಟ್ ಕಾಯಿನ್ ಪ್ರಕರಣದ ಆರೋಪಿ ಶ್ರೀಕಿ ಸೇರಿ ಇಬ್ಬರು ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಟ್ ಕಾಯಿನ್ ಪ್ರಕರಣದ ಆರೋಪಿ ಶ್ರೀಕಿ ಸೇರಿ ಇಬ್ಬರು ಅರೆಸ್ಟ್

ಬೆಂಗಳೂರು: ಬಿಟ್ ಕಾಯಿನ್ ಪ್ರಕರಣದ ಆರೋಪಿ ಶ್ರೀಕೃಷ್ಣ ಅಲಿಯಾಸ್ ಶ್ರಿಕಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಶ್ರೀಕಿ ಮತ್ತು ಪ್ರತಿಷ್ಠಿತ ಜ್ಯುವೆಲ್ಲರಿ ಗ್ರೂಪ್ ಮಾಲೀಕರ ಮಗ ವಿಷ್ಣು ಭಟ್ ಅವರ ಹೋಟೆಲ್ ನಲ್ಲಿ ಗಲಾಟೆ ಮಾಡಿದ್ದರು. ಬೆಂಗಳೂರಿನ ಓಲ್ಡ್ ಏರ್ಪೋರ್ಟ್ ರಸ್ತೆಯ ಫೈವ್ ಸ್ಟಾರ್ ಹೋಟೆಲ್ ರಾಯಲ್ ಆರ್ಕಿಡ್ ನಲ್ಲಿ ಶ್ರೀಕೃಷ್ಣ ತಂಗಿದ್ದರು. ಇಂದು ಮಧ್ಯಾಹ್ನ ವಿಷ್ಣುಭಟ್ ಹೋಟೆಲ್ ಗೆ ಬಂದಿದ್ದು, ಮದ್ಯದ ಅಮಲಿನಲ್ಲಿದ್ದ ಹಿನ್ನೆಲೆಯಲ್ಲಿ ಹೋಟೆಲ್ ಸಿಬ್ಬಂದಿ ಹೋಟೆಲ್ ಒಳಗೆ ಬಿಡಲು ಒಪ್ಪಿರಲಿಲ್ಲ ಎನ್ನಲಾಗಿದೆ.

ವಿಷ್ಣು ಭಟ್ ಹೋಟೆಲ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದು, ವಿಷ್ಣುವಿನ ಜೊತೆ ಸೇರಿಕೊಂಡು ಶ್ರೀಕಿ ಗಲಾಟೆ ಮಾಡಿದ್ದಾರೆ. ಗಲಾಟೆ ಅತಿರೇಕಕ್ಕೆ ಹೋಗುತ್ತಿದ್ದಂತೆ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ವಿಷ್ಣು ಭಟ್ ಮತ್ತು ಶ್ರೀಕಿ ಅವರನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಡಿಸಿಪಿ ಶರಣಪ್ಪ ಅವರು ವಿಚಾರಣೆ ನಡೆಸಿದ್ದಾರೆ. ಶ್ರೀಕೃಷ್ಣ ತಂಗಿದ್ದ ಹೋಟೆಲ್ ಕೊಠಡಿಯಲ್ಲಿ ತಪಾಸಣೆ ಮಾಡಲಾಗಿದೆ. ಎಸಿಪಿ ಕುಮಾರ್ ಮತ್ತು ಜೀವನ್ ಭೀಮಾನಗರ ಠಾಣೆಯ ಇನ್ಸ್ಪೆಕ್ಟರ್ ರಾಜಣ್ಣ ತಪಾಸಣೆ ನಡೆಸಿದ್ದಾರೆ. ಎರಡುವರೆ ತಿಂಗಳಿನಿಂದಲೂ ಶ್ರೀಕಿ ರಾಯಲ್ ಆರ್ಕಿಡ್ ಹೋಟೆಲ್ ನಲ್ಲಿ ತಂಗಿದ್ದ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...