alex Certify ನಾಟಕದ ವೇಳೆಯಲ್ಲೇ ಕಲಾವಿದ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಟಕದ ವೇಳೆಯಲ್ಲೇ ಕಲಾವಿದ ಸಾವು

ಮಂಡ್ಯ: ನಾಟಕ ಮಾಡುವಾಗಲೇ ಕುಸಿದು ಬಿದ್ದು ಕಲಾವಿದ ಮೃತಪಟ್ಟ ಘಟನೆ ಮಂಡ್ಯ ಜಿಲ್ಲೆ ಮಳವಲ್ಲಿ ತಾಲೂಕಿನಲ್ಲಿ ನಡೆದಿದೆ.

ದುಗ್ಗನಹಳ್ಳಿ ಗ್ರಾಮದ 46 ವರ್ಷದ ನಂಜಯ್ಯ(46) ಮೃತಪಟ್ಟವರು. ಕುರುಕ್ಷೇತ್ರದ ‘ಕೃಷ್ಣ ಸಂಧಾನ’ ನಾಟಕದಲ್ಲಿ ಅವರು ಸಾರ್ಥಕಿ ಪಾತ್ರವನ್ನು ನಿರ್ವಹಿಸುತ್ತಿದ್ದರು. ನಾಟಕ ಪ್ರದರ್ಶನದ ವೇಳೆ ವೇದಿಕೆ ಮೇಲೆಯೇ ಪಾತ್ರಧಾರಿ ನಂಜಯ್ಯ ಏಕಾಏಕಿ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ಪ್ರಯತ್ನ ನಡೆಯಿತಾದರೂ, ಈ ವೇಳೆಗಾಗಲೇ ಅವರು ಮೃತಪಟ್ಟಿದ್ದರೆನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...