alex Certify BIG NEWS: ಅರುಣ್ ಸಿಂಗ್ ಭೇಟಿಯಾದ ಸ್ವಾಮೀಜಿ, BSY ಬದಲಾವಣೆಗೆ ಒತ್ತಡ…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಅರುಣ್ ಸಿಂಗ್ ಭೇಟಿಯಾದ ಸ್ವಾಮೀಜಿ, BSY ಬದಲಾವಣೆಗೆ ಒತ್ತಡ…?

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಮಾಡದಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪರವಾಗಿರುವ ಮಠಾಧೀಶರು ಒತ್ತಾಯಿಸಿದ್ದರೆ, ಬದಲಾವಣೆ ಮಾಡಬೇಕೆಂದು ಪಂಚಮಸಾಲಿ ಶ್ರೀಗಳು ಒತ್ತಡ ಹೇರಿದ್ದಾರೆ ಎಂದು ಹೇಳಲಾಗಿದೆ.

ರಾಜ್ಯಕ್ಕೆ ಭೇಟಿ ನೀಡಿರುವ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಕಳೆದ ಮೂರು ದಿನಗಳಿಂದ ಸರಣಿ ಸಭೆ ನಡೆಸಿ ಸಚಿವರು, ಶಾಸಕರು, ಪಕ್ಷದ ನಾಯಕರೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ಗುರುವಾರ ರಾತ್ರಿ ಕುಮಾರಕೃಪ ಅತಿಥಿಗೃಹದಲ್ಲಿ ಅರುಣ್ ಸಿಂಗ್ ಅವರನ್ನು ಭೇಟಿ ಮಾಡಿದ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಬದಲಾವಣೆ ಮಾಡಿ ಎಂದು ಹೇಳಿದ್ದಾರೆನ್ನಲಾಗಿದೆ.

ಪಂಚಮಸಾಲಿ ಸಮಾಜಕ್ಕೆ ಮುಖ್ಯಮಂತ್ರಿ ಹುದ್ದೆ ನೀಡುವಂತೆ ಶ್ರೀಗಳು ಮನವಿ ಮಾಡಿದ್ದು, ಯಡಿಯೂರಪ್ಪ ಅವರ ವಿರೋಧಿ ಬಣದಲ್ಲಿರುವ ಶಾಸಕರು ಮಾಡಿದ ಆರೋಪಗಳನ್ನು ಸ್ವಾಮೀಜಿ ಅವರಿಗೆ ತಿಳಿಸಿದ್ದಾರೆ. ಆಡಳಿತ ದುರುಪಯೋಗವಾಗುತ್ತಿದೆ. ಹೊಸಬರಿಗೆ ಅವಕಾಶ ನೀಡಬೇಕು. ನಾಲ್ಕು ಬಾರಿ ಸಮಾಜ ಅವರನ್ನು ಮುಖ್ಯಮಂತ್ರಿ ಮಾಡಿದರೂ ಸಮಾಜದ ಋಣ ತೀರಿಸದೇ ಸಮಾಜ ಒಡೆಯುವ ಕೆಲಸ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ ಎನ್ನಲಾಗಿದೆ.

ಸಮಾಜದ ಹೆಸರು ಬಳಸಿಕೊಂಡು ಅಧಿಕಾರಕ್ಕೆ ಬಂದವರು, ಒಡಕು ಮೂಡಿಸುವ ಕೆಲಸ ಮಾಡಿದ್ದು, ಅವರನ್ನು ಬದಲಾವಣೆ ಮಾಡಬೇಕೆಂದು ಸ್ವಾಮೀಜಿ ಅರುಣ್ ಸಿಂಗ್ ಅವರಿಗೆ ತಿಳಿಸಿದ್ದಾರೆನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...