alex Certify ಆರ್ಯ ಈಡಿಗ ನಾರಾಯಣ ಗುರುಗಳ ಅವಹೇಳನ: ಲೇಖಕ ರಾಮಚಂದ್ರ ಗುಹಾ ವಿರುದ್ಧ ದೂರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆರ್ಯ ಈಡಿಗ ನಾರಾಯಣ ಗುರುಗಳ ಅವಹೇಳನ: ಲೇಖಕ ರಾಮಚಂದ್ರ ಗುಹಾ ವಿರುದ್ಧ ದೂರು

ಬೆಂಗಳೂರು: ಆರ್ಯ ಈಡಿಗ ಸಮಾಜದ ಧರ್ಮಗುರು ಬ್ರಹ್ಮಶ್ರೀ ನಾರಾಯಣ ಗುರುಗಳ ಬಗ್ಗೆ ಲೇಖಕ ರಾಮಚಂದ್ರ ಗುಹಾ ಅವಹೇಳನಕಾರಿಯಾಗಿ ಬರೆದಿದ್ದಾರೆ ಎಂದು ಆರೋಪಿಸಲಾಗಿದೆ.

ಅರೆಮಲ್ಲಾಪುರದ ಶರಣಬಸವೇಶ್ವರ ಮಹಾಸಂಸ್ಥಾನದ ಡಾ. ಪ್ರಣವಾನಂದ ಸ್ವಾಮೀಜಿ ಈ ಕುರಿತಾಗಿ ಉಪ್ಪಾರಪೇಟೆ ಪೊಲೀಸ್ ಠಾಣೆಗೆ ರಾಮಚಂದ್ರ ಗುಹಾ ಅವರ ವಿರುದ್ಧ ದೂರು ನೀಡಿದ್ದಾರೆ.

ಇತಿಹಾಸ ಬರಹಗಾರರಾದ ಖ್ಯಾತ ಲೇಖಕ ರಾಮಚಂದ್ರ ಗುಹಾ ಅವರು ‘ಇಂಡಿಯಾ ಆಫ್ಟರ್ ಗಾಂಧಿ’ ಎಂಬ ಪುಸ್ತಕದಲ್ಲಿ ನಾರಾಯಣ ಗುರುಗಳನ್ನು ಹೆಂಡ ಇಳಿಸುವವರ ನಾಯಕ ಎಂದು ಬರೆದಿದ್ದಾರೆ. ಜಾತಿ ನಿಂದನೆ ಮಾಡಿ, ಕೀಳು ಮಟ್ಟದ ಜಾತಿ ಎಂದು ಹೇಳಿದ್ದಾರೆ. ಸಮಾಜದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದ್ದಾರೆ ಎಂದು ಆರೋಪಿಸಿದ್ದು, ಗುಹಾ ಅವರನ್ನು ಬಂಧಿಸಿ ಕ್ರಮ ಕೈಗೊಳ್ಳಬೇಕೆಂದು ದೂರು ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...