alex Certify ಮಾಸಿಕ 15 ಸಾವಿರ ರೂ. ಗೌರವಧನಕ್ಕೆ ಒತ್ತಾಯಿಸಿ ರಾಜ್ಯಾದ್ಯಂತ ಕೆಲಸ ಸ್ಥಗಿತಗೊಳಿಸಿ ಆಶಾ ಕಾರ್ಯಕರ್ತೆಯರ ಅನಿರ್ದಿಷ್ಟಾವಧಿ ಧರಣಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಾಸಿಕ 15 ಸಾವಿರ ರೂ. ಗೌರವಧನಕ್ಕೆ ಒತ್ತಾಯಿಸಿ ರಾಜ್ಯಾದ್ಯಂತ ಕೆಲಸ ಸ್ಥಗಿತಗೊಳಿಸಿ ಆಶಾ ಕಾರ್ಯಕರ್ತೆಯರ ಅನಿರ್ದಿಷ್ಟಾವಧಿ ಧರಣಿ

ಬೆಂಗಳೂರು: ಮಾಸಿಕ 15,000 ರೂ. ನಿಶ್ಚಿತ ಗೌರವಧನ ನೀಡುವುದು ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಜನವರಿ 7ರಿಂದ ಸ್ವಾತಂತ್ರ್ಯ ಉದ್ಯಾನದಲ್ಲಿ ಆಶಾ ಕಾರ್ಯಕರ್ತೆಯರು ಅನಿರ್ಧಿಷ್ಟಾವಧಿ ಧರಣಿ ಕೈಗೊಂಡಿದ್ದಾರೆ.

ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಕಾರ್ಯದರ್ಶಿ ಡಿ. ನಾಗಲಕ್ಷ್ಮಿ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, ರಾಜ್ಯದಾದ್ಯಂತ ಆಶಾ ಕಾರ್ಯಕರ್ತೆಯರು ಕೆಲಸ ಸ್ಥಗಿತಗೊಳಿಸಿ ಹೋರಾಟ ಕೈಗೊಳ್ಳಲಿದ್ದಾರೆ. ಮೊದಲ ದಿನ ಸುಮಾರು 30,000 ಮಹಿಳೆಯರು ಧರಣಿಯಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಸರ್ಕಾರ ನಮ್ಮ ಬೇಡಿಕೆಗಳನ್ನು ಈಡೇರಿಸಲು ಸ್ಪಷ್ಟ ಭರವಸೆ ನೀಡುವವರೆಗೆ ಹೋರಾಟ ಮುಂದುವರೆಸುವುದಾಗಿ ಅವರು ತಿಳಿಸಿದ್ದಾರೆ. ಆರೋಗ್ಯ ಇಲಾಖೆ ಸೇರಿ ಹಲವು ಇಲಾಖೆಗಳ ಕೆಲಸ ಮಾಡುತ್ತಿದ್ದರೂ ಕಡಿಮೆ ಗೌರವಧನಕ್ಕೆ ದುಡಿಯುವಂತಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಗೌರವಧನ ಮತ್ತು ಪ್ರೋತ್ಸಾಹ ಧನ ಸೇರಿಸಿ ಒಟ್ಟು 15000 ರೂ. ಮಾಸಿಕ ಗೌರವಧನ ನಿಗದಿಯಾಗಬೇಕು. ನಗರದಲ್ಲಿ ಕೆಲಸ ಮಾಡುವ ಆಶಾ ಕಾರ್ಯಕರ್ತೆಯರಿಗೆ ಕನಿಷ್ಠ 2000 ರೂ. ಗೌರವಧನ ಹೆಚ್ಚಳ ಮಾಡಬೇಕೆಂದು ಒತ್ತಾಯಿಸಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Proč semena Jak vařit těstoviny, aby Nejen vejce: potraviny, Může se srdce zastavit bez varování? Odpověď kardiologa 22. února – jaký církevní svátek slavíme a Jak barva vašeho jazyka odráží vaše zdraví: Proč se nazývá Jak přežít bez Jak si zapamatovat příbuzné: první sobota rodičů v roce 8 důvodů, proč kočka mňouká: Nejčastější příčiny kočičích koncertů 7 způsobů, jak přeměnit staré tričko Recept na červený zelí salát s okurkou, mrkví a hráškem