alex Certify Big News: ಪ್ರವಾಹ ಸಂತ್ರಸ್ತರ ನೆರವಿಗೆ ಧಾವಿಸಿದ್ದ ಇಬ್ಬರು ಪೊಲೀಸರು ನೀರುಪಾಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Big News: ಪ್ರವಾಹ ಸಂತ್ರಸ್ತರ ನೆರವಿಗೆ ಧಾವಿಸಿದ್ದ ಇಬ್ಬರು ಪೊಲೀಸರು ನೀರುಪಾಲು

ಅಸ್ಸಾಂನ ಕೆಲ ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿದೆ. ಹೀಗಾಗಿ ಸಾರ್ವಜನಿಕರ ನೆರವಿಗೆ ರಾಜ್ಯ ತುರ್ತು ನಿರ್ವಹಣಾ ಪಡೆಯೊಂದಿಗೆ ಪೊಲೀಸರು ಸಹ ಕೈಜೋಡಿಸಿದ್ದಾರೆ. ಈ ಕಾರ್ಯದಲ್ಲಿ ತೊಡಗಿದ್ದ ಇಬ್ಬರು ಪೊಲೀಸರು ಪ್ರವಾಹದಲ್ಲಿ ಕೊಚ್ಚಿ ಹೋಗಿರುವ ದಾರುಣ ಘಟನೆ ಈ ಸಂದರ್ಭದಲ್ಲಿ ನಡೆದಿದೆ.

ಅಸ್ಸಾಂನ ನಾಗೊನ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಕಂಪೂರ್ ಪೊಲೀಸ್ ಠಾಣೆಯ ಅಧಿಕಾರಿ ಸಮುಜ್ಜಲ್ ಕಾಕೊಟಿ ಹಾಗೂ ಕಾನ್ಸ್ಟೇಬಲ್ ರಜೀಬ್ ಮೃತಪಟ್ಟಿದ್ದಾರೆ. ಭಾನುವಾರ ರಾತ್ರಿ ಪರಿಹಾರ ಕಾರ್ಯದಲ್ಲಿ ತೊಡಗಿದ್ದ ವೇಳೆ ಈ ಘಟನೆ ನಡೆದಿದೆ.

ಕಾನ್ಸ್ಟೇಬಲ್ ರಜೀಬ್ ಕೊಚ್ಚಿ ಹೋಗುತ್ತಿದ್ದಾಗ ಅವರನ್ನು ರಕ್ಷಿಸಲು ಸಮುಜ್ಯಲ್ ಮುಂದಾಗಿದ್ದು, ಆದರೆ ಪ್ರವಾಹದ ನೀರು ರಭಸವಾಗಿ ಹರಿಯುತ್ತಿದ್ದ ಕಾರಣ ಇಬ್ಬರು ಕೊಚ್ಚಿಕೊಂಡು ಹೋಗಿದ್ದಾರೆ. ರಾತ್ರಿಯೇ ಅವರುಗಳ ಹುಡುಕಾಟಕ್ಕೆ ತೀವ್ರ ಕಾರ್ಯಾಚರಣೆ ನಡೆಯಿತಾದರೂ ಇಂದು ಬೆಳಗ್ಗೆ ಇಬ್ಬರ ಮೃತದೇಹಗಳು ಪತ್ತೆಯಾಗಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...