alex Certify BIG NEWS: ವಸತಿ ಶಾಲಾ ಮಕ್ಕಳ ಮೇಲೆ ಮಾರಣಾಂತಿಕ ಹಲ್ಲೆ; ಬೆಲ್ಟ್, ದೊಣ್ಣೆಯಿಂದ ಮನಬಂದಂತೆ ಥಳಿಸಿದ ಕಿರಾತಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಸತಿ ಶಾಲಾ ಮಕ್ಕಳ ಮೇಲೆ ಮಾರಣಾಂತಿಕ ಹಲ್ಲೆ; ಬೆಲ್ಟ್, ದೊಣ್ಣೆಯಿಂದ ಮನಬಂದಂತೆ ಥಳಿಸಿದ ಕಿರಾತಕ

ತುಮಕೂರು: ವಸತಿ ಶಾಲೆಯೊಂದರ ಮಕ್ಕಳ ಮೇಲೆ ವ್ಯಕ್ತಿಯೋರ್ವ ಮನಬಂದಂತೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.

ತುಮಕೂರು ತಾಲೂಕಿನ ಮಲ್ಲಸಂದ್ರದ ವಿಶ್ವಭಾರತಿ ಸರ್ಕಾರಿ ಅನುದಾನಿತ ವಸತಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ಶಾಲೆಯ ಕಾರ್ಯದರ್ಶಿ ಎನ್.ಮೂರ್ತಿ ಅವರ ಪುತ್ರ ಭರತ್ ಈ ಕೃತ್ಯವೆಸಗಿದ್ದು, ಕುಡಿದ ಅಮಲಿನಲ್ಲಿ ವಸತಿ ಶಾಲೆಯ 40 ಮಕ್ಕಳನ್ನು ಸಾಲಾಗಿ ನಿಲ್ಲಿಸಿ ಬೆಲ್ಟ್ ಹಾಗೂ ದೊಣ್ಣೆಯಿಂದ ಮನಬಂದಂತೆ ಹೊಡೆದಿದ್ದಾನೆ.

ಹಲ್ಲೆ ಘಟನೆಯನ್ನು ಶಾಲಾ ಆಡಳಿತ ಮಂಡಳಿ ಮುಚ್ಚಿಟ್ಟಿತ್ತು. ಘಟನೆ ನಡೆದ ಮೂರು ದಿನಗಳ ಬಳಿಕ ಹಲ್ಲೆಗೊಳಗಾದ ಮಕ್ಕಳು ತಮ್ಮ ಪೋಷಕರಿಗೆ ಮಾಹಿತಿ ನೀಡಿದ್ದಾರೆ. ವಿಚಾರ ತಿಳಿಯುತ್ತಿದ್ದಂತೆ ಪೋಷಕರು ಶಾಲೆಗೆ ದಾವಿಸಿದ್ದಾರೆ. ಆರೋಪಿ ಭರತ್ ಪರಾರಿಯಾಗಿದ್ದಾನೆ.

ಪ್ರಕರಣ ದಾಖಲಿಸಿಕೊಂಡಿರುವ ತುಮಕೂರು ಗ್ರಾಮಾಂತರ ಠಾಣೆ ಪೊಲೀಸರು ಆರೋಪಿ ಭರತ್ ಗಾಗಿ ಹುಡುಕಾಟ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...