alex Certify ದೆಹಲಿ ಸಿಎಂ ನಿವಾಸದ ಮೇಲೆ ದಾಳಿ ಮಾಡಿದವರಿಗೆ ಬಿಜೆಪಿಯಿಂದ ಹಾರ ಹಾಕಿ ಸನ್ಮಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದೆಹಲಿ ಸಿಎಂ ನಿವಾಸದ ಮೇಲೆ ದಾಳಿ ಮಾಡಿದವರಿಗೆ ಬಿಜೆಪಿಯಿಂದ ಹಾರ ಹಾಕಿ ಸನ್ಮಾನ

‘ದಿ ಕಾಶ್ಮೀರ್ ಫೈಲ್ಸ್’ ಚಿತ್ರದ ಕುರಿತಂತೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದ ಎದುರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಭಾರತೀಯ ಜನತಾ ಯುವ ಮೋರ್ಚಾದ 8 ಮಂದಿ ಕಾರ್ಯಕರ್ತರು ದಾಂಧಲೆ ನಡೆಸಿದ್ದರು.

ಈ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಅವರುಗಳ ವಿರುದ್ಧ ಪ್ರಕರಣ ದಾಖಲಿಸಿ ಜೈಲಿಗೆ ಕಳಿಸಿದ್ದರು. 14 ದಿನಗಳ ಬಳಿಕ ಇವರುಗಳಿಗೆ ನ್ಯಾಯಾಲಯ ಜಾಮೀನು ನೀಡಿದ್ದು ಬಿಡುಗಡೆಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ದೆಹಲಿ ಬಿಜೆಪಿ ಘಟಕ ತನ್ನ ಕಚೇರಿಯಲ್ಲಿ ಎಂಟು ಮಂದಿ ಯುವಕರಿಗೆ ಹಾರಹಾಕಿ ಸನ್ಮಾನ ಮಾಡಿದೆ.

ಶಿವಮೊಗ್ಗದ ವಿವಿಧೆಡೆ ಸಂತೋಷ್ ಪಾಟೀಲ್ ‘ಶ್ರದ್ಧಾಂಜಲಿ’ ಫ್ಲೆಕ್ಸ್

ದೆಹಲಿ ಬಿಜೆಪಿ ಘಟಕದ ಅಧ್ಯಕ್ಷ ಆದೇಶ್ ಗುಪ್ತ ಈ ಕುರಿತು ಟ್ವೀಟ್ ಮಾಡಿದ್ದು, ಬಿಜೆಪಿ ಯುವಮೋರ್ಚಾದ 8 ಮಂದಿ ಕಾರ್ಯಕರ್ತರು ಹಿಂದು ವಿರೋಧಿ ಕೇಜ್ರಿವಾಲ್ ವಿರುದ್ಧ ಪ್ರತಿಭಟಿಸಿದ ಕಾರಣಕ್ಕೆ ಜೈಲಿಗೆ ಹೋಗಿದ್ದರು. 14 ದಿನಗಳ ಬಳಿಕ ಅವರಿಗೆ ಜಾಮೀನು ದೊರಕಿದ್ದು, ಹಾರ್ದಿಕವಾಗಿ ಸ್ವಾಗತಿಸುತ್ತೇನೆ ಎಂದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...