alex Certify ರೈತ ಸಮುದಾಯಕ್ಕೆ ಮತ್ತೊಂದು ಗುಡ್ ನ್ಯೂಸ್: ಉಚಿತವಾಗಿ ಅಟಲ್ ಜೀ ಕೇಂದ್ರದಲ್ಲಿ ಕಂದಾಯ ದಾಖಲೆ ವಿತರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈತ ಸಮುದಾಯಕ್ಕೆ ಮತ್ತೊಂದು ಗುಡ್ ನ್ಯೂಸ್: ಉಚಿತವಾಗಿ ಅಟಲ್ ಜೀ ಕೇಂದ್ರದಲ್ಲಿ ಕಂದಾಯ ದಾಖಲೆ ವಿತರಣೆ

ಬೆಂಗಳೂರು: ರಾಜ್ಯದ ರೈತರ ಮನೆ ಬಾಗಿಲಿಗೆ ಉಚಿತವಾಗಿ ಕಂದಾಯ ದಾಖಲೆ ವಿತರಿಸುವ ಯೋಜನೆಗೆ ಸರ್ಕಾರ ಚಾಲನೆ ನೀಡಿದೆ.

ಮನೆಬಾಗಿಲಿಗೆ ದಾಖಲೆಗಳನ್ನು ನೀಡಲಾಗಿದ್ದು, ದಾಖಲೆ ಸಿಗದವರಿಗೆ ಆಟಲ್ ಜೀ ಜನಸ್ನೆಹಿ ಕೇಂದ್ರದಲ್ಲಿ ಮಾರ್ಚ್ 21 ರಿಂದ 27 ರವರೆಗೆ ಉಚಿತವಾಗಿ ವಿತರಿಸಲಾಗುತ್ತದೆ. ಇಲಾಖೆ ವತಿಯಿಂದ ಸುತ್ತೋಲೆ ಹೊರಡಿಸಿದ್ದು, ರೈತರಿಗೆ ಕಂದಾಯ ದಾಖಲೆಗಳನ್ನು ಉಚಿತವಾಗಿ ತಲುಪಿಸಬೇಕು. ಆಧಾರ್ ಕಾರ್ಡ್ ಬಳಸಿ ಗುರುತಿಸಬೇಕು, ಇಲ್ಲದಿದ್ದರೆ ಪಡಿತರ ಚೀಟಿ ಬಳಸಿ ಗುರುತಿಸಬೇಕು. ಮೊಬೈಲ್ ಸಂಖ್ಯೆ ಲಭ್ಯವಿದ್ದರೆ ಪಡೆದುಕೊಳ್ಳಬೇಕು ಎಂದು ಕಂದಾಯ ಇಲಾಖೆ ಉಪಕಾರ್ಯದರ್ಶಿ ಡಾ.ಎಂ.ಎನ್. ರಾಜೇಂದ್ರ ಪ್ರಸಾದ್ ಸುತ್ತೋಲೆ ಹೊರಡಿಸಿದ್ದಾರೆ.

ರೈತರ ಮನೆ ಬಾಗಿಲಿಗೆ ಪಹಣಿ, ಅಟ್ಲಾಸ್, ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರಗಳನ್ನು ವಿತರಿಸಲಾಗುವುದು. 50 ಲಕ್ಷ ರೈತ ಕುಟುಂಬಗಳಿಗೆ 4 ಕೋಟಿ ದಾಖಲೆಗಳನ್ನು ವಿತರಿಸಲಾಗಿದ್ದು, ದಾಖಲೆ ಸಿಗದವರು ಅಟಲ್ ಜೀ ಜನಸ್ನೇಹಿ ಕೇಂದ್ರಗಳಲ್ಲಿ ಮಾ. 21 ರಿಂದ 27 ರವರೆಗೆ ಉಚಿತವಾಗಿ ಪಡೆದುಕೊಳ್ಳಬಹುದು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...