alex Certify ಗಣಪತಿ ಪೆಂಡಾಲ್ ಬಳಿ ಸಿನಿಮೀಯ ಶೈಲಿಯಲ್ಲಿ ಅಟ್ಟಾಡಿಸಿ ಕೊಲೆ ಯತ್ನ: ಮೂವರು ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಣಪತಿ ಪೆಂಡಾಲ್ ಬಳಿ ಸಿನಿಮೀಯ ಶೈಲಿಯಲ್ಲಿ ಅಟ್ಟಾಡಿಸಿ ಕೊಲೆ ಯತ್ನ: ಮೂವರು ಅರೆಸ್ಟ್

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ನಗರದಲ್ಲಿ ಸಿನಿಮೀಯ ಶೈಲಿಯಲ್ಲಿ ಕೊಲೆಗೆ ಯತ್ನ ನಡೆಸಲಾಗಿದೆ. ಲಾಂಗ್, ಮಚ್ಚುಗಳಿಂದ ಅಟ್ಟಾಡಿಸಿ ಜಿಮ್ ತರಬೇತುದಾರನ ಕೊಲೆಗೆ ಯತ್ನ ನಡೆದಿದೆ.

ನಗರದ ವಾಪಸಂದ್ರದಲ್ಲಿ ಗಣೇಶ ಪ್ರತಿಷ್ಠಾಪನೆ ಮಾಡಿದ್ದ ಸ್ಥಳದ ಬಳಿಯೇ ಜಿಮ್ ಕೋಚರ್ ಬಿ.ಎನ್. ನರಸಿಂಹಮೂರ್ತಿ ಅಲಿಯಾಸ್ ವಿಕ್ಕಿ ಕೊಲೆಗೆ ಯತ್ನ ನಡೆಸಲಾಗಿದೆ. ಎಲ್.ಎಲ್.ಬಿ. ವಿದ್ಯಾರ್ಥಿ ಚಂದ್ರಶೇಖರ ಮತ್ತು ತಂಡದವರಿಂದ ಕೃತ್ಯ ನಡೆದಿದೆ.

ಚೆಂಡೂರು ನಿವಾಸಿ ಅರವಿಂದ್, ಹರೀಶ್, ಪ್ರಸಾದ್ ಸೇರಿದಂತೆ ಹಲವರು ಕೊಲೆಗೆ ಯತ್ನಿಸಿದ್ದಾರೆ. ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಕೊಲೆಗೆ ಚಂದ್ರಶೇಖರ್ ಸುಫಾರಿ ನೀಡಿದ್ದ ಎನ್ನಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಚಂದ್ರಶೇಖರ್, ಪ್ರಸಾದ್ ಮತ್ತು ಅರವಿಂದ್ ಅವರನ್ನು ಬಂಧಿಸಲಾಗಿದೆ. ಚಿಕ್ಕಬಳ್ಳಾಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...