alex Certify ಚಿಕ್ಕಮ್ಮನ ಮೇಲೆ ಕಣ್ಣು ಹಾಕಿದ ಕಿರಾತಕನಿಂದ ನೀಚ ಕೃತ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಿಕ್ಕಮ್ಮನ ಮೇಲೆ ಕಣ್ಣು ಹಾಕಿದ ಕಿರಾತಕನಿಂದ ನೀಚ ಕೃತ್ಯ

ಯಾದಗಿರಿ: ಸಂಬಂಧದಲ್ಲಿ ಚಿಕ್ಕಮ್ಮನಾಗಿರುವ ಮಹಿಳೆಯ ಮೇಲೆ ಕಾಮುಕನೊಬ್ಬ ಅತ್ಯಾಚಾರಕ್ಕೆ ಯತ್ನಿಸಿ ತೀವ್ರವಾಗಿ ಹಲ್ಲೆ ಮಾಡಿದ ಘಟನೆ ಯಾದಗಿರಿ ಜಿಲ್ಲೆ ರಾಮಸಮುದ್ರ ತಾಂಡಾದಲ್ಲಿ ನಡೆದಿದೆ.

ಗೋಪಾಲ್ ಪವಾರ್ ಎಂಬಾತನೇ ಇಂತಹ ಕೃತ್ಯವೆಸಗಿದ ಆರೋಪಿ. ಸಂಬಂಧದಲ್ಲಿ ಚಿಕ್ಕಮ್ಮ ಆಗಬೇಕಿದ್ದ ಮಹಿಳೆ ಮೇಲೆ ಮೂರು ವರ್ಷಗಳಿಂದ ಆರೋಪಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಹೀಗಾಗಿ ಸಂಬಂಧಿಕರು ಬುದ್ಧಿವಾದ ಹೇಳಿದ್ದು, ಇನ್ನಮುಂದೆ ಆ ರೀತಿ ಮಾಡಲ್ಲ ಎಂದು ಆಣೆ ಪ್ರಮಾಣ ಮಾಡಿದ್ದಾನೆ.

ಮಹಿಳೆಯ ಗಂಡ ಕೆಲಸದ ನಿಮಿತ್ತ ಮನೆಯಿಂದ ಹೊರ ಹೋಗಿದ್ದ ಸಂದರ್ಭದಲ್ಲಿ ಮದ್ಯ ಸೇವಿಸಿ ಬಂದ ಗೋಪಾಲ್ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದು, ಮನೆಯಲ್ಲಿದ್ದ ಇಬ್ಬರು ಹೆಣ್ಣುಮಕ್ಕಳು ತಡೆಯಲು ಮುಂದಾಗಿದ್ದಾರೆ. ಈ ಮೂವರ ಮೇಲೆ ಹಲ್ಲೆ ಮಾಡಿದ ಆರೋಪಿ ಪರಾರಿಯಾಗಿದ್ದಾನೆ.

ಗಾಯಗೊಂಡಿರುವ ಮಹಿಳೆ ಹಾಗೂ ಆಕೆಯ ಇಬ್ಬರು ಹೆಣ್ಣುಮಕ್ಕಳನ್ನು ಯಾದಗಿರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಯಾದಗಿರಿ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪರಾರಿಯಾಗಿರುವ ಆರೋಪಿ ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...