ಬೆಂಗಳೂರು : ಯುಜಿ ನೀಟ್ (UG NEET) ಪರೀಕ್ಷೆಯಲ್ಲಿ ಅರ್ಹತೆ ಪಡೆದ ರಾಜ್ಯದ ವಿದ್ಯಾರ್ಥಿಗಳ ಮೂಲ ದಾಖಲೆಗಳ ಪರಿಶೀಲನೆಯನ್ನು ಅ.13ರಂದು ನಾಳೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಲು ತೀರ್ಮಾನಿಸಿದೆ.
ಇದುವರೆಗೂ ದಾಖಲಾತಿಗಳನ್ನು ಪರಿಶೀಲನೆ ಮಾಡಿಸಿಕೊಳ್ಳದಿರುವವರು ಮಾತ್ರ ಹಾಜರಾಗಬೇಕು, ನಾಳೆ ಬೆಳಗ್ಗೆ 10 ಗಂಟೆಯಿಂದ ದಾಖಲೆಗಳ ಪರಿಶೀಲನೆ ನಡೆಯಲಿದ್ದು, ಇದು ಕೊನೆಯ ಅವಕಾಶವಾಗಿದೆ ಎಂದು ನಿರ್ದೇಶಕಿ ಎಸ್ ರಮ್ಯಾ ಹೇಳಿದ್ದಾರೆ.
ಆರ್ಯುವೇದ, ಯುನಾನಿ ಮತ್ತು ಹೋಮಿಯೋಪತಿ ಓದಲು ಆಸಕ್ತಿ ಇರುವ ಹಾಗೂ ಯುಜಿ ನೀಟ್ ಪರೀಕ್ಷೆಯಲ್ಲಿ ಅರ್ಹತೆ ಪಡೆದ ರಾಜ್ಯದ ವಿದ್ಯಾರ್ಥಿಗಳ ಮೂಲ ದಾಖಲೆಗಳ ಪರೀಕ್ಷೆ ನಾಳೆ ನಡೆಯಲಿದ್ದು, ವಿದ್ಯಾರ್ಥಿಗಳು ನಿಗದಿತ ದಿನಾಂಕದೊಳಗೆ ಹಾಜರಾಗುವಂತೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನಿರ್ದೇಶಕಿ ಎಸ್ ರಮ್ಯಾ ಹೇಳಿದ್ದಾರೆ.