alex Certify ಪಡಿತರ ಚೀಟಿದಾರರ ಗಮನಕ್ಕೆ : ಡಿ.30 ರೊಳಗೆ ಈ ‘ಕೆಲಸ’ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ‘ರೇಷನ್ ಕಾರ್ಡ್’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಡಿತರ ಚೀಟಿದಾರರ ಗಮನಕ್ಕೆ : ಡಿ.30 ರೊಳಗೆ ಈ ‘ಕೆಲಸ’ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ‘ರೇಷನ್ ಕಾರ್ಡ್’

ರಾಜ್ಯದ ಪ್ರತಿಯೊಬ್ಬರಿಗೂ ಆಧಾರ್ ಕಾರ್ಡ್ ಎಷ್ಟು ಮುಖ್ಯವೋ…ಪ್ರತಿ ಕುಟುಂಬಕ್ಕೂ ಪಡಿತರ ಚೀಟಿ ಕೂಡ ಅಷ್ಟೇ ಮುಖ್ಯ ಆಗಿರುತ್ತದೆ. ರಾಜ್ಯದಲ್ಲಿ ಸರ್ಕಾರದ ಎಲ್ಲಾ ಯೋಜನೆಗಳಿಗೂ ಪಡಿತರ ಚೀಟಿ ಬಹಳ ಮುಖ್ಯ ಆಗಿರುತ್ತದೆ . ಆದ್ದರಿಂದ ನಿಮ್ಮ ಪಡಿತರ ಚೀಟಿಯನ್ನು ರದ್ದಾಗದಂತೆ ನೋಡಿಕೊಳ್ಳುವುದು ಬಹಳ ಮುಖ್ಯ ಆಗಿದೆ.

ಇಂದಿನ ಕಾಲದಲ್ಲಿ ಅಸಲಿ ರೇಷನ್ ಕಾರ್ಡ್ ಯಾವುದು, ನಕಲಿ ರೇಷನ್ ಕಾರ್ಡ್ ಯಾವುದು ಎಂಬುದನ್ನು ತಿಳಿಯುವುದು ಬಹಳ ಕಷ್ಟ ಆಗಿರುವುದರಿಂದ ಸರಕಾರ ಪಡಿತರ ಚೀಟಿಗಳಿಗೆ ಇಕೆವೈಸಿ ಕಡ್ಡಾಯಗೊಳಿಸಿದೆ.
ಇದಕ್ಕಾಗಿ ಸರ್ಕಾರ ಡಿಸೆಂಬರ್ 30 ರ ತನಕ ಕಾಲಾವಕಾಶ ನೀಡಿದ್ದು, ಇದನ್ನು ಮಾಡಿಸದೇ ಹೋದರೆ ನಿಮ್ಮ ರೇಷನ್ ಕಾರ್ಡ್ ರದ್ದಾಗುವ ಸಾಧ್ಯತೆಯಿದೆ. ಸರ್ಕಾರದ ಪ್ರತಿಯೊಂದು ಯೋಜನೆಗಳ ಸೌಲಭ್ಯ ಪಡೆಯಲು ರೇಷನ್ ಕಾರ್ಡ್ ಬೇಕಾಗಿರುತ್ತದೆ. ರೇಷನ್ ಕಾರ್ಡ್ ಪಡಿತರ ಪಡೆಯಲು ಮಾತ್ರವಲ್ಲದೇ ಗುರುತಿನ ಚೀಟಿ ಪಡೆಯಲು ಕೂಡ ಸಹಕಾರಿಯಾಗುತ್ತದೆ. ಈಗಾಗಲೇ ಜಾರಿಗೆ ತಂದಿರುವ ಸರ್ಕಾರ ಎಲ್ಲಾ ಯೋಜನೆಗಳಿಗೆ ರೇಷನ್ ಕಾರ್ಡ್ ಕಡ್ಡಾಯವಾಗಿದೆ.ಸರ್ಕಾರ ರೇಷನ್ ಕಾರ್ಡ್ ಗೆ ಇಕೆವೈಸಿ ಮಾಡಿಸುವುದು ಕಡ್ಡಾಯಗೊಳಿಸಿದೆ.

E-KYC ಮಾಡಿಸುವುದು ಹೇಗೆ..? ಇಲ್ಲಿದೆ ಮಾಹಿತಿ

ಮೊದಲಿಗೆ, ಗ್ರಾಹಕರು ತಮ್ಮ ಬ್ಯಾಂಕಿನ ಅಧಿಕೃತ ಪೋರ್ಟಲ್ ಅನ್ನು ತೆರೆಯಬೇಕು ಮತ್ತು ಲಾಗ್ ಇನ್ ಮಾಡಬೇಕು. ಅದರ ನಂತರ, ಕೆವೈಸಿ ಆಯ್ಕೆಯ ಮೇಲೆ ಕ್ಲಿಕ್ ಮಾಡಿ.

– ಸೂಚನೆಗಳನ್ನು ಅನುಸರಿಸಿ ಮತ್ತು ನಿಮ್ಮ ಹೆಸರು, ವಿಳಾಸ, ಹುಟ್ಟಿದ ದಿನಾಂಕ ಇತ್ಯಾದಿಗಳನ್ನು ನಮೂದಿಸಿ.
– ಆಧಾರ್, ಪ್ಯಾನ್ ಮತ್ತು ಇತರ ಅಗತ್ಯ ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ನಂತರ ಅಪ್ಲೋಡ್ ಮಾಡಬೇಕು. ಈ ದಾಖಲೆಗಳನ್ನು ಎರಡೂ ಬದಿಗಳಲ್ಲಿ ಸ್ಕ್ಯಾನ್ ಮಾಡುವುದು ಕಡ್ಡಾಯವಾಗಿದೆ.
– ಪ್ರಕ್ರಿಯೆ ಪೂರ್ಣಗೊಂಡ ನಂತರ, ಸಬ್ಮಿಟ್ ಆಯ್ಕೆಯ ಮೇಲೆ ಕ್ಲಿಕ್ ಮಾಡಿ. ಇದು ನಿಮಗೆ ಸೇವಾ ವಿನಂತಿ ಸಂಖ್ಯೆಯನ್ನು ನೀಡುತ್ತದೆ. ಕೆವೈಸಿ ನವೀಕರಣ ಮಾಹಿತಿಯನ್ನು ನಂತರ ಗ್ರಾಹಕರಿಗೆ ಸಂದೇಶ ಅಥವಾ ಮೇಲ್ ಮೂಲಕ ತಿಳಿಸಲಾಗುತ್ತದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...