alex Certify ಪಡಿತರ ಚೀಟಿದಾರರ ಗಮನಕ್ಕೆ : ಜೂ.27 ರೊಳಗೆ ಪಡಿತರ ಪಡೆಯಲು ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಡಿತರ ಚೀಟಿದಾರರ ಗಮನಕ್ಕೆ : ಜೂ.27 ರೊಳಗೆ ಪಡಿತರ ಪಡೆಯಲು ಸೂಚನೆ

ಬಳ್ಳಾರಿ : ಜಿಲ್ಲಾ ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ವಿತರಿಸಲಾಗುವ ಜೂನ್ ತಿಂಗಳ ಪಡಿತರವನ್ನು ಎಲ್ಲಾ ಪಡಿತರ ಚೀಟಿದಾರರು ಜೂ.27 ರೊಳಗಾಗಿ ಪಡೆದುಕೊಳ್ಳಬೇಕು ಎಂದು ಉಪನಿರ್ದೇಶಕ ಮೊಹಮ್ಮದ್ ಖೈಜರ್ ಅವರು ತಿಳಿಸಿದ್ದಾರೆ.

ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಆಯುಕ್ತರ ಆದೇಶದಂತೆ, ಜೂ.28 ರಿಂದ ಎನ್ಐಸಿಯವರು ಸರ್ವರ್ ನಿರ್ವಹಣಾ ಕಾರ್ಯ ಕೈಗೊಳ್ಳಲಿದ್ದು, ಜೂನ್ ತಿಂಗಳ ಪಡಿತರ ವಿತರಣಾ ಕಾರ್ಯವನ್ನು ಜೂ.27 ರೊಳಗಾಗಿ ಮುಕ್ತಾಯಗೊಳಿಸುವಂತೆ ತಿಳಿಸಿದ್ದಾರೆ.

ಆದ್ದರಿಂದ ಜಿಲ್ಲೆಯ ಎಲ್ಲಾ ಆಹಾರ ಶಿರಸ್ತೇದಾರರು, ಆಹರಾ ನಿರೀಕ್ಷಕರು ತಮ್ಮ ವ್ಯಾಪ್ತಿಯ ಎಲ್ಲಾ ನ್ಯಾಯಬೆಲೆ ಅಂಗಡಿ ಮಾಲೀಕರಿಗೆ ಜೂ.27 ರೊಳಗಾಗಿ ಪಡಿತರ ವಿತರಣಾ ಕಾರ್ಯವನ್ನು ಕಡ್ಡಾಯವಾಗಿ ಮುಕ್ತಾಯಗೊಳಿಸುವಂತೆ ಹಾಗೂ ಯಾವುದೇ ಪಡಿತರ ಚೀಟಿದಾರರಿಗೆ ಅವರ ಹಕ್ಕಿನ ಪಡಿತರ ನಿರಾಕರಣೆಯಾಗದಂತೆ ಕ್ರಮ ಕೈಗೊಳ್ಳಬೇಕು ಉಪನಿರ್ದೇಶಕ ಮೊಹಮ್ಮದ್ ಖೈಜರ್ ಅವರು ತಿಳಿಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...