alex Certify ಪೋಷಕರೇ ಗಮನಿಸಿ : ನವೋದಯ ವಿದ್ಯಾಲಯ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪೋಷಕರೇ ಗಮನಿಸಿ : ನವೋದಯ ವಿದ್ಯಾಲಯ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

ಗಾಳಿಬೀಡು ಜವಾಹರ್ ನವೋದಯ ವಿದ್ಯಾಲಯದ 6ನೇ ತರಗತಿ ಪ್ರವೇಶಕ್ಕೆ 2025-26 ನೇ ಸಾಲಿನ ಪಿಎಮ್ಶ್ರೀ ಸ್ಕೂಲ್ ಜವಾಹರ್ ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆಗೆ 5 ನೇ ತರಗತಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಯೊಂದಿಗೆ ಶಾಲೆಯ ಮುಖ್ಯೋಪಾಧ್ಯಾಯರಿಂದ ಸಹಿ ಮಾಡಿದ ನವೋದಯ ಅರ್ಜಿ ಫಾರ್ಮ್, ಮಗುವಿನ ಆಧಾರ್ ಕಾರ್ಡ್, ವಾಸಸ್ಥಳ ದೃಢೀಕರಣ ಪತ್ರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಮಗುವಿನ ಇತ್ತೀಚಿನ ಭಾವಚಿತ್ರ, ಮಗು ಮತ್ತು ಪಾಲಕರ ಸಹಿ ಈ ದಾಖಲೆಗಳನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಸೆಪ್ಟೆಂಬರ್, 16 ಕೊನೆಯ ದಿನವಾಗಿದೆ. ಪ್ರವೇಶ ಪರೀಕ್ಷೆಯು 2025 ರ ಜನವರಿ, 18 ರಂದು ನಡೆಯಲಿದೆ.

ವಿದ್ಯಾರ್ಥಿಯು ದಿನಾಂಕ 01-05-2013 ರಿಂದ 31-07-2015 ರೊಳಗೆ ಜನಿಸಿರಬೇಕು. ಅಭ್ಯರ್ಥಿಯ ಪೋಷಕರು ಕೊಡಗು ಜಿಲ್ಲೆಯವರೇ ಆಗಿರಬೇಕು. ಅರ್ಜಿದಾರರು ಕೊಡಗು ಜಿಲ್ಲೆಯ ನಿವಾಸಿಯಾಗಿರಬೇಕು ಮತ್ತು ಕೊಡಗು ಜಿಲ್ಲೆಯ ಸರ್ಕಾರಿ, ಸರ್ವ ಶಿಕ್ಷಣ ಅಭಿಯಾನ, ಸರ್ಕಾರದಿಂದ ಮಾನ್ಯತೆ ಪಡೆದಿರುವ ಶಾಲೆಗಳಲ್ಲಿ ಪ್ರಸ್ತುತ 5ನೇ ತರಗತಿ ಓದುತ್ತಿರಬೇಕು. ಅರ್ಜಿಯನ್ನು ವೆಬ್ಸೈಟ್ https://navodaya.gov.in ಮೂಲಕ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಗಣೇಶ ಹೆಗಡೆ ಟಿ.ಜಿ.ಟಿ.ಕನ್ನಡ 9482557322, ಮಾರುತಿ ಪಿ.ಡಿ. ಟಿ.ಜಿ.ಟಿ. ಕನ್ನಡ 9611862835 ಹಾಗೂ ಅನುರಾಧ ಜೆ.ಎಸ್.ಎ. 93808052179 ನ್ನು ಸಂಪರ್ಕಿಸಬಹುದು ಎಂದು ಗಾಳಿಬೀಡು ಜವಾಹರ್ ನವೋದಯ ವಿದ್ಯಾಲಯದ ಪಿಎಮ್ಶ್ರೀ ಶಾಲೆಯ ಪ್ರಾಂಶುಪಾಲರು ತಿಳಿಸಿದ್ದಾರೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...