alex Certify ಪಿಂಚಣಿದಾರರ ಗಮನಕ್ಕೆ : ಡಿ.13ರಂದು ‘ಪಿಂಚಣಿ ಅದಾಲತ್’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಿಂಚಣಿದಾರರ ಗಮನಕ್ಕೆ : ಡಿ.13ರಂದು ‘ಪಿಂಚಣಿ ಅದಾಲತ್’

ಬಳ್ಳಾರಿ : ಕಾರ್ಮಿಕರ ಭವಿಷ್ಯನಿಧಿ ಸಂಘಟನೆಯಿಂದ ಪಿಂಚಣಿದಾರರ ಕುಂದುಕೊರತೆಗಳನ್ನು ನಿವಾರಿಸಲು ಡಿಸೆಂಬರ್ 13 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ರವರೆಗೆ ಬಳ್ಳಾರಿ ಪ್ರಾದೇಶಿಕ ಕಚೇರಿಯಲ್ಲಿ ಪಿಂಚಣಿ ಅದಾಲತ್ ಏರ್ಪಡಿಸಲಾಗಿದೆ.

ಬಳ್ಳಾರಿ, ಕೊಪ್ಪಳ, ವಿಜಯನಗರ ಮತ್ತು ಚಿತ್ರದುರ್ಗ ಜಿಲ್ಲೆಗಳ ಪಿಂಚಣಿದಾರರು ತಮ್ಮ ಕುಂದುಕೊರತೆಗಳನ್ನು ಬಳ್ಳಾರಿಯ ಪ್ರಾದೇಶಿಕ ಕಚೇರಿಯ ಸಾರ್ವಜನಿಕ ಸಂಪರ್ಕ ಅಧಿಕಾರಿ, ಇವರಿಗೆ ಪತ್ರ ಅಥವಾ ಇ-ಮೇಲ್ ಮೂಲಕ ತಮ್ಮ ಪಿ.ಪಿ.ಒ ಸಂಖ್ಯೆ ವಿಳಾಸ, ದೂರವಾಣಿ, ಮೊಬೈಲ್ ಸಂಖ್ಯೆ, ಕುಂದು ಕೊರತೆಯ ಸ್ವರೂಪ ಇತ್ಯಾದಿಗಳನ್ನು ಪತ್ರ ಮೂಲಕ ಬರೆದು ಡಿಸೆಂಬರ್ 10 ರೊಳಗೆ ಕಳುಹಿಸಬೇಕು. ಪತ್ರ, ಲಕೋಟೆಯ ಮೇಲೆ ಪಿಂಚಣಿ ಅದಾಲತ್ ಎಂದು ಬರೆಯಬೇಕು.

ಹೆಚ್ಚಿನ ಮಾಹಿತಿಗಾಗಿ ದೂ.08392-226304 ಗೆ ಸಂಪರ್ಕಿಸಬಹುದು ಎಂದು ಕ್ಷೇತ್ರಿಯ ಭವಿಷ್ಯನಿಧಿ ಆಯುಕ್ತ ಕೆ.ವೆಂಕಟ ಸುಬ್ಬಯ್ಯ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...