alex Certify ಬೆಂಗಳೂರಿನ ಆಸ್ತಿ ಮಾಲೀಕರ ಗಮನಕ್ಕೆ : ‘OTS’ ಯೋಜನೆ ನ. 30 ಕ್ಕೆ ಮುಕ್ತಾಯ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಿನ ಆಸ್ತಿ ಮಾಲೀಕರ ಗಮನಕ್ಕೆ : ‘OTS’ ಯೋಜನೆ ನ. 30 ಕ್ಕೆ ಮುಕ್ತಾಯ..!

ಬೆಂಗಳೂರು : …ಬಿಬಿಎಂಪಿ ಘೋಷಿಸಿದ್ದ ಒಂದು ಬಾರಿ ತೀರುವಳಿ (OTS) ಯೋಜನೆ ನವೆಂಬರ್ 30 ಕ್ಕೆ ಮುಕ್ತಾಯವಾಗಲಿದ್ದು, ಆಸ್ತಿ ಮಾಲಿಕರು ಇದರ ಪ್ರಯೋಜನ ಪಡೆಯಬಹುದಾಗಿದೆ.

ಒಂದು ಬಾರಿ ಪರಿಹಾರ ಯೋಜನೆಯನ್ನು (ಒಟಿಎಸ್) ಹೆಚ್ಚಿನ ವೈಶಿಷ್ಟ್ಯತೆಗಳೊಂದಿಗೆ ನವೆಂಬರ್ 30ರ ವರೆಗೆ ವಿಸ್ತರಿಸಲಾಗಿದೆ. ದಂಡ ಮತ್ತು ಬಡ್ಡಿ ರಹಿತ ಪಾವತಿಗೆ ಇದೊಂದು ಕೊನೆಯ ಅವಕಾಶವನ್ನು ನೀಡಲಾಗಿದೆ. ಸದುಪಯೋಗಪಡಿಸಿಕೊಳ್ಳಿ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.

ಆನ್ಲೈನ್ ಮೂಲಕ ಪಾವತಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ(https://bbmptax.karnataka.gov.in/
ಆಸ್ತಿ ತೆರಿಗೆ ಎಷ್ಟು ಪಾವತಿಸಬೇಕಿದೆ, ಎಲ್ಲಿ ಪಾವತಿಸಬೇಕು ಎಂಬ ಬಗ್ಗೆ ಗೊಂದಲಗಳಿದ್ದಲ್ಲಿ ಸಹಾಯವಾಣಿ 1533 ಗೆ ಕರೆ ಮಾಡಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಪ್ರಕಟಣೆ ಹೊರಡಿಸಿದೆ.ಬಿಬಿಎಂಪಿ ಕಾಯ್ದೆಯಲ್ಲಿ ಆಸ್ತಿತೆರಿಗೆ ಬಾಕಿ ವಸೂಲಾತಿಗೆ ಅವಕಾಶವಿದೆ. ಆದಾಗ್ಯೂ, ಒಟಿಎಸ್ ನಾಗರಿಕರಿಗೆ ಸಹಾಯ ಮಾಡಲು ಸರ್ಕಾರ ಮತ್ತು ಬಿಬಿಎಂಪಿಯೂ ಜೊತೆಯಾಗಿ ಕಾರ್ಯನಿರ್ವಹಿಸಲಿದೆ .ನಾಗರಿಕರು https://bbmptax.karnataka.gov.in ಮೂಲಕ ಆನ್ಲೈನ್ ನಲ್ಲಿ ಆಸ್ತಿತೆರಿಗೆಯನ್ನು ಸುಲಭವಾಗಿ ಪಾವತಿಸಬಹುದು ಎಂದು ಪ್ರಕಟಣೆ ಹೊರಡಿಸಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...