alex Certify ಕ್ರೀಡಾಪಟುಗಳೇ ಗಮನಿಸಿ : ‘ಕರ್ನಾಟಕ ಕ್ರೀಡಾ ರತ್ನ’ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕ್ರೀಡಾಪಟುಗಳೇ ಗಮನಿಸಿ : ‘ಕರ್ನಾಟಕ ಕ್ರೀಡಾ ರತ್ನ’ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

‘ಬೆಂಗಳೂರು ನಗರ ಜಿಲ್ಲೆ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2022ನೇ ಸಾಲಿನ ಹಿರಿಯ ಕ್ರೀಡಾಪಟು ಹಾಗೂ ತರಬೇತುದಾರರಾಗಿ ಸಾಧನೆ ಮಾಡಿರುವ ರಾಜ್ಯದ ಹಿರಿಯ ಕ್ರೀಡಾಪಟುಗಳಿಗೆ / ತರಬೇತುದಾರರಿಗೆ ಜೀವಮಾನ ಸಾಧನೆ ಪ್ರಶಸ್ತಿಗಾಗಿ ಹಾಗೂ ಗ್ರಾಮೀಣ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಲು ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿ ನೀಡಲು ಅರ್ಹ ಕ್ರೀಡಾಪಟುಗಳಿಂದ ಸೇವಾಸಿಂಧು ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತ ಕ್ರೀಡಾಪಟುಗಳು ಸೇವಾಸಿಂಧು ಆನ್ ಲೈನ್ ವೆಬ್ ಸೈಟ್ https://sevasindhuservices.karnataka.gov.in ನಲ್ಲಿ ನವೆಂಬರ್ 29 ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬೆಂಗಳೂರು ನಗರ ಜಿಲ್ಲೆ ಗೇಟ್ ನಂ.12, ಕೊಠಡಿ ಸಂಖ್ಯೆ 17-18, ಶ್ರೀ ಕಂಠೀರವ ಕ್ರೀಡಾಂಗಣ, ಕಸ್ತೂರಬಾ ರಸ್ತೆ, ಬೆಂಗಳೂರು-560001ಗೆ ಅಥವಾ ಮತ್ತು ದೂ.ಸಂ. 080-22239771, 9480886470 ಗೆ ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ನಗರ ಜಿಲ್ಲೆಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...