alex Certify ವಿದ್ಯಾರ್ಥಿಗಳ ಗಮನಕ್ಕೆ : ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ |Scholarship | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯಾರ್ಥಿಗಳ ಗಮನಕ್ಕೆ : ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ |Scholarship

ಮಡಿಕೇರಿ : ಕುಶಾಲನಗರ ಪುರಸಭೆಯ ನಗರ ಬಡಜನರ ಕಲ್ಯಾಣಕ್ಕಾಗಿ ಶೇ.7.25 ರ ಅನುದಾನದಡಿ ಕುಶಾಲನಗರ ಪುರಸಭೆ ವ್ಯಾಪ್ತಿಯ ನಗರ ಬಡಜನರ ಕಲ್ಯಾಣಕ್ಕಾಗಿ ಎಸ್ಎಸ್ಎಲ್ಸಿ, ಪಿಯುಸಿ ಮತ್ತು ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡುವ ಕಾರ್ಯಕ್ರಮ ಹಮ್ಮಿಕೊಂಡಿದೆ. ಈ ಸೌಲಭ್ಯವನ್ನು ಪಡೆದುಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಯೊಂದಿಗೆ ಪಡಿತರ ಚೀಟಿ, ಆಧಾರ ಕಾರ್ಡ್, ಇತ್ತೀಚಿನ ವಾಸಸ್ಥಳ ದೃಢೀಕರಣ ಪತ್ರ, ಅಭ್ಯರ್ಥಿಯ 01 ಭಾವಚಿತ್ರ, ಆದಾಯ ದೃಢೀಕರಣ ಪತ್ರ(ಆದಾಯವು 3 ಲಕ್ಷದೊಳಗಿರಬೇಕು), ವ್ಯಾಸಂಗ ದೃಢೀಕರಣ ಪತ್ರ ಸಲ್ಲಿಸಬೇಕು. ಅರ್ಜಿದಾರರ ಆಯ್ಕೆಯನ್ನು ಪುರಸಭೆ ಕಾಯ್ದಿರಿಸಿಕೊಂಡಿದೆ.

ಈ ಸೌಲಭ್ಯ ಪಡೆದುಕೊಳ್ಳಲು ಇಚ್ಛಿಸುವ ಅರ್ಹ ಅಭ್ಯರ್ಥಿಗಳು ಸಂಬಂಧಪಟ್ಟ ದಾಖಲಾತಿಗಳೊಂದಿಗೆ ಜನವರಿ, 09 ರ ಸಂಜೆ 5.30 ಗಂಟೆಯೊಳಗೆ ಮುಖ್ಯಾಧಿಕಾರಿ ಪುರಸಭೆ, ಕುಶಾಲನಗರ ವಿಳಾಸಕ್ಕೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಯನ್ನು ಕುಶಾಲನಗರ ಪುರಸಭೆ ಕಚೇರಿಯಲ್ಲಿ ಪಡೆಯಬಹುದು ಎಂದು ಕುಶಾಲನಗರ ಪುರಸಭೆ ಮುಖ್ಯಾಧಿಕಾರಿ ಅವರು ತಿಳಿಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...