alex Certify ಪ್ರವಾಸಿಗರ ಗಮನಕ್ಕೆ : ಮೈಸೂರು ಕಡೆ ಟ್ರಿಪ್ ಪ್ಲ್ಯಾನ್ ಮಾಡಿದ್ದೀರಾ..? ಈ ಸುದ್ದಿ ಓದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರವಾಸಿಗರ ಗಮನಕ್ಕೆ : ಮೈಸೂರು ಕಡೆ ಟ್ರಿಪ್ ಪ್ಲ್ಯಾನ್ ಮಾಡಿದ್ದೀರಾ..? ಈ ಸುದ್ದಿ ಓದಿ

ಮೈಸೂರು : ಮೈಸೂರು ಕಡೆ ಏನಾದರೂ ನೀವು ಟ್ರಿಪ್ ಪ್ಲ್ಯಾನ್ ಮಾಡಿದ್ದೀರಾ..? ಹಾಗಾದ್ರೆ ಈಗಲೇ ಕ್ಯಾನ್ಸಲ್ ಮಾಡಿಬಿಡಿ.ಮೈಸೂರಿನಲ್ಲಿ ಆಗಸ್ಟ್ 1 ಮತ್ತು 2ರಂದು ಜಿ 20 ಶೃಂಗಸಭೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ವಿದೇಶಿ ಗಣ್ಯರು ಅರಮನೆಗೆ ಭೇಟಿ ನೀಡಲಿದ್ದಾರೆ.

ಈ ಹಿನ್ನೆಲೆ ಮೈಸೂರು ಅರಮನೆ ಸೇರಿ ಹಲವು ಪ್ರವಾಸಿ ತಾಣಗಳಿಗೆ ನಿರ್ಬಂಧ ಹೇರಲಾಗಿದೆ. ಮುಂಜಾಗೃತಾ ಕ್ರಮವಾಗಿ ಎಲ್ಲಾ ಮಾದರಿಯ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಆಗಸ್ಟ್ 2ರಂದು ರಾತ್ರಿ 7ರಿಂದ 8 ಗಂಟೆಯವರೆಗೆ ಧ್ವನಿ ಮತ್ತು ಬೆಳಕು ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮ ವೀಕ್ಷಣೆಗೂ ಪ್ರವಾಸಿಗರಿಗೆ ನಿರ್ಬಂಧಿಸಲಾಗಿದೆ ಎಂದು ಮೈಸೂರು ಆಡಳಿತ ಮಂಡಳಿ ಉಪ ನಿರ್ದೇಶಕ ಟಿ.ಎಸ್.ಸುಬ್ರಹ್ಮಣ್ಯ ತಿಳಿಸಿದ್ದಾರೆ.

ಮೈಸೂರು ಅರಮನೆ ವೀಕ್ಷಣೆಗೆ ನಿರ್ಬಂಧ ಹೇರಲಾಗಿದೆ. ಜೊತೆಗೆ ಬೇರೆ ಬೇರೆ ಪ್ರವಾಸಿ ತಾಣಗಳಿಗೆ ವಿದೇಶಿ ಗಣ್ಯರು ಭೇಟಿ ನೀಡಲಿದ್ದು, ಆ ವೇಳೆ ಪ್ರವಾಸಿಗರಿಗೆ ನಿರ್ಬಂಧ ಇರಲಿದೆ. ಆಗಸ್ಟ್ 2 ರವರೆಗೆ ಮೈಸೂರು ಕಡೆ ಟ್ರಿಪ್ ಪ್ಲ್ಯಾನ್ ಮಾಡಿದ್ರೆ ಕ್ಯಾನ್ಸಲ್ ಮಾಡಿಕೊಳ್ಳುವುದು ಒಳಿತು.

 

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...