![](https://kannadadunia.com/wp-content/uploads/2024/01/Srirama.jpg)
ಬೆಂಗಳೂರು : ಅಯೋಧ್ಯೆ ರಾಮಮಂದಿರದಲ್ಲಿ ಶ್ರೀರಾಮನ ವಿಗ್ರಹ ಪ್ರತಿಷ್ಠಾಪನೆ ನಡೆಯಲಿರುವ ಜನವರಿ 22ರಂದು ರಾಜ್ಯದಲ್ಲಿ ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿರುವ ಎಲ್ಲ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ನೆರವೇರಿಸುವಂತೆ ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಸೂಚನೆ ನೀಡಿದ್ದಾರೆ.
ರಾಜ್ಯ ಸರ್ಕಾರವು ಈ ಕುರಿತು ಅಧಿಕೃತ ಆದೇಶ ಹೊರಡಿಸಿದ್ದು, ಶ್ರೀ ರಾಮನ ಜನ್ಮಸ್ಥಳವಾದ ಅಯೋಧ್ಯೆಯಲ್ಲಿ ಹೊಸದಾಗಿ ನಿರ್ಮಿಸಿರುವ ಶ್ರೀರಾಮ ಮಂದಿರದಲ್ಲಿ ದಿನಾಂಕ:22.01.2024 ರಂದು ನೂತನವಾಗಿ ಶ್ರೀರಾಮನ ವಿಗ್ರಹದ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮವು ನಡೆಯಲಿರುವುದರಿಂದ, ದೇಶದ/ರಾಜ್ಯದ ಎಲ್ಲಾ ಜನರ ಒಳಿತಿಗಾಗಿ ಕರ್ನಾಟಕ ರಾಜ್ಯದ ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಅಧಿಸೂಚಿತ ದೇವಾಲಯಗಳಲ್ಲಿ ದಿನಾಂಕ:22.01.2024 ರಂದು ಶ್ರೀರಾಮನ ವಿಗ್ರಹ ಪ್ರಾಣ ಪ್ರತಿಷ್ಠಾಪನಾ ಸಮಯದಲ್ಲಿ ವಿಶೇಷ ಪೂಜೆ/ಪ್ರಾರ್ಥನ/ ಮಂಗಳಾರತಿಯನ್ನು ನಡೆಸಲು ಸೂಚಿಸಿದೆ.
![](https://kannadadunia.com/wp-content/uploads/2024/01/WhatsApp-Image-2024-01-09-at-5.18.29-AM.jpeg)