alex Certify ಇಡಿ ಅಧಿಕಾರಿಗಳು ಸುಮ್ಮನೇ ಕರ್ಕೊಂಡು ಬಂದಿದ್ದಾರೆ: ಮಾಜಿ ಸಚಿವ ನಾಗೇಂದ್ರ ಮೊದಲ ಪ್ರತಿಕ್ರಿಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಡಿ ಅಧಿಕಾರಿಗಳು ಸುಮ್ಮನೇ ಕರ್ಕೊಂಡು ಬಂದಿದ್ದಾರೆ: ಮಾಜಿ ಸಚಿವ ನಾಗೇಂದ್ರ ಮೊದಲ ಪ್ರತಿಕ್ರಿಯೆ

ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನು ಜಾರಿ ನಿರ್ದೇಶನಾಲಯ-ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿನ ನಿವಾಸದಿಂದ ಮಾಜಿ ಸಚಿವ ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದು, ಶಾಂತಿನಗರದ ಇಡಿ ಕಚೇರಿಯಲ್ಲಿ ಅವರನ್ನು ತೀವ್ರ ವಿಚಾರಣೆಗೊಳಪಡಿಸಲಾಗಿದೆ.

ಇಡಿ ವಶಕ್ಕೆ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿರುವ ನಾಗೇಂದ್ರ, ನನಗೇನೂ ಗೊತ್ತಿಲ್ಲ, ಇಡಿಯವರು ಸುಮ್ಮನೇ ಕರ್ಕೊಂಡು ಬಂದಿದ್ದಾರೆ. ನಾನು ಯಾರಿಗೂ ಏನೂ ಕೊಟ್ಟಿಲ್ಲ ಎಂದಿದ್ದಾರೆ.

ಮನೆಯಿಂದ ಏಕಾಏಕಿ ಕರ್ಕೊಂಡು ಬಂದಿದ್ದಾರೆ. ನನಗೆ ಯಾವುದೇ ಮಾಹಿತಿ ಇಲ್ಲ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...