alex Certify BIG NEWS: ಕೈತಪ್ಪಿದ ಸಚಿವ ಸ್ಥಾನ -ರಾಜಕೀಯಕ್ಕೆ ಗುಡ್ ಬೈ ಹೇಳಿದ ಬಿಜೆಪಿ ನಾಯಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೈತಪ್ಪಿದ ಸಚಿವ ಸ್ಥಾನ -ರಾಜಕೀಯಕ್ಕೆ ಗುಡ್ ಬೈ ಹೇಳಿದ ಬಿಜೆಪಿ ನಾಯಕ

ನವದೆಹಲಿ: ಕೇಂದ್ರ ಸಚಿವ ಸಂಪುಟ ಪುನಾರಚನೆ ಸಂದರ್ಭದಲ್ಲಿ ಹೊರಗುಳಿದ ಬಿಜೆಪಿ ಸಂಸದ ಬಾಬುಲ್ ಸುಪ್ರಿಯೋ ಸಕ್ರಿಯ ರಾಜಕಾರಣಕ್ಕೆ ಗುಡ್ ಬೈ ಹೇಳುವುದಾಗಿ ತಿಳಿಸಿದ್ದಾರೆ.

ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಇತ್ತೀಚೆಗಷ್ಟೇ ಪುನಾರಚನೆಯಾಗಿದ್ದು, ಡಿ.ವಿ. ಸದಾನಂದ ಗೌಡ. ಹರ್ಷವರ್ಧನ್, ಪ್ರಕಾಶ್ ಜಾವಡೇಕರ್ ಸೇರಿದಂತೆ ಹಲವು ಸಚಿವರನ್ನು ಹೊರಗಿಡಲಾಗಿದೆ. ಇದೇ ವೇಳೆ ಕೇಂದ್ರ ಸಚಿವರಾಗಿದ್ದ ಬಾಬುಲ್ ಸುಪ್ರಿಯೋ ಅವರು ಕೂಡ ಸಚಿವ ಸ್ಥಾನ ಕಳೆದುಕೊಂಡಿದ್ದಾರೆ.

ಇದರಿಂದ ಬೇಸರಗೊಂಡ ಬಾಬುಲ್ ಸುಪ್ರಿಯೋ ಸಕ್ರಿಯ ರಾಜಕಾರಣಕ್ಕೆ ವಿದಾಯ ಹೇಳುವುದಾಗಿ ತಿಳಿಸಿದ್ದಾರೆ. ನಾನು ಸಕ್ರಿಯ ರಾಜಕಾರಣಕ್ಕೆ ವಿದಾಯ ಹೇಳುತ್ತೇನೆ. ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದೇನೆ ಎಂದು ಬಿಜೆಪಿಯ ಅಸನ್ಸೋಲ್ ಸಂಸದರಾದ ಅವರು ತಿಳಿಸಿದ್ದಾರೆ.

ಸಚಿವ ಸ್ಥಾನ ಕೈತಪ್ಪಿರುವುದು ಕೂಡ ತಮ್ಮ ನಿರ್ಧಾರಕ್ಕೆ ಕಾರಣವೆಂದು ತಿಳಿಸಿದ್ದಾರೆ. ನನ್ನ ಅಧಿಕಾರದ ಅವಧಿಯಲ್ಲಿ ಅನೇಕರಿಗೆ ಸಹಾಯ ಮಾಡಿದ್ದೇನೆ. ಕೆಲವರಿಗೆ ಬೇಸರ ಕೂಡ ಉಂಟಾಗಿದೆ. ನಾನು ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ. ಸಕ್ರಿಯ ರಾಜಕೀಯಕ್ಕೆ ವಿದಾಯ ಹೇಳುತ್ತೇನೆ. ಬೇರೆ ಪಕ್ಷ ಸೇರಲ್ಲ ಎಂದು ಅವರು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...