alex Certify ಚಿಂಚನಸೂರ್ ಗೆ ಎಂಎಲ್ಸಿ ಸ್ಥಾನ ಕೊಟ್ಟಿದ್ದೆವು: ಏಕೆ ಪಕ್ಷ ಬಿಟ್ಟರು ಎಂದು ಗೊತ್ತಿಲ್ಲ: ಶೋಭಾ ಕರಂದ್ಲಾಜೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಿಂಚನಸೂರ್ ಗೆ ಎಂಎಲ್ಸಿ ಸ್ಥಾನ ಕೊಟ್ಟಿದ್ದೆವು: ಏಕೆ ಪಕ್ಷ ಬಿಟ್ಟರು ಎಂದು ಗೊತ್ತಿಲ್ಲ: ಶೋಭಾ ಕರಂದ್ಲಾಜೆ

ಬೆಂಗಳೂರು: ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಬಿಜೆಪಿ ತೊರೆದ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಶೋಭಾ ಕರಂದ್ಲಾಜೆ ಪ್ರತಿಕ್ರಿಯೆ ನೀಡಿದ್ದು, ನಮ್ಮದು ರಾಷ್ಟ್ರೀಯವಾದಿ ಪಕ್ಷ. ಭಾರತೀಯ ಜನತಾ ಪಕ್ಷ ಸಮುದ್ರ ಇದ್ದಂತೆ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಾಬುರಾವ್ ಚಿಂಚನಸೂರ್ ಅವರಿಗೆ ವಿಧಾನ ಪರಿಷತ್ ಸ್ಥಾನ ಕೊಟ್ಟಿದ್ದೆವು. ಅವರಿಗೆ ಬಿಜೆಪಿಯವರು ಅನ್ಯಾಯ ಮಾಡಿಲ್ಲ. ಕೋಲಿ ಸಮುದಾಯ ಬಿಜೆಪಿ ಜೊತೆಗೆ ಇದೆ ಎಂದು ಹೇಳಿದ್ದಾರೆ.

ಬಾಬುರಾವ್ ಚಿಂಚನಸೂರ್ ಅವರು ಏಕೆ ಬಿಜೆಪಿ ತೊರೆದಿದ್ದಾರೆ ಎನ್ನುವುದು ಗೊತ್ತಿಲ್ಲ. ನಾವು ಅವರಿಗೆ ಗೌರವ, ಸ್ಥಾನಮಾನ ಕೊಟ್ಟಿದ್ದೇವೆ. ಅವರು ಯಾರ ಜೊತೆಗೆ ಅಡ್ಜಸ್ಟ್ ಮೆಂಟ್ ಮಾಡಿಕೊಂಡಿದ್ದಾರೋ ಗೊತ್ತಿಲ್ಲ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...