alex Certify BREAKING: ಮಗು ಸಾವಿನಿಂದ ಮನನೊಂದು ಜೀವ ಕಳೆದುಕೊಂಡ ತಾಯಿ…? ಕೊಲೆ ಆರೋಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಮಗು ಸಾವಿನಿಂದ ಮನನೊಂದು ಜೀವ ಕಳೆದುಕೊಂಡ ತಾಯಿ…? ಕೊಲೆ ಆರೋಪ

ಬೆಂಗಳೂರು: ಮಗು ಸಾವಿನಿಂದ ಮನನೊಂದು ತಾಯಿ ನೇಣಿಗೆ ಶರಣಾದ ಘಟನೆ ಬೆಂಗಳೂರಿನ ತಾವರೆಕೆರೆಯಲ್ಲಿ ನಡೆದಿದೆ.

ಪಲ್ಲವಿ ಮೃತಪಟ್ಟವರು. 4 ವರ್ಷದ ಹಿಂದೆ ಪಲ್ಲವಿಗೆ ಮದುವೆಯಾಗಿದ್ದು, ಆರು ತಿಂಗಳ ಹಿಂದೆ ಗಂಡು ಮಗು ಜನಿಸಿತ್ತು. ಪ್ರಿಮೆಚ್ಯೂರ್ ಮಗುವಾದ ಹಿನ್ನೆಲೆ ಹೃದಯ ಸಮಸ್ಯೆ ಉಂಟಾಗಿತ್ತು. ನಿನ್ನೆ ಬೆಳಿಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಮಗು ಮೃತಪಟ್ಟಿದೆ. ಆಸ್ಪತ್ರೆಯಿಂದ ಮನೆಗೆ ವಾಪಸಾದ ಬಳಿಕ ಗಂಡುಮಗು ಮೃತಪಟ್ಟಿದ್ದು, ಇದರಿಂದ ಮನನೊಂದು ತಾಯಿ ಪಲ್ಲವಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಮೃತದೇಹದ ಬಳಿ ಡೆತ್ ನೋಟ್ ಪತ್ತೆಯಾಗಿದೆ. ಕೆಲಸ ಮುಗಿಸಿ ಪತಿ ಮನೆಗೆ ವಾಪಸಾದಾಗ ಘಟನೆ ಬೆಳಕಿಗೆ ಬಂದಿದ್ದು, ಪಲ್ಲವಿ ತಂದೆಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಅಲ್ಲದೆ, ತಮ್ಮ ಪರಿಚಯಸ್ಥರ ಆಂಬುಲೆನ್ಸ್ ನಲ್ಲಿ ಮೃತದೇಹ ಸಾಗಿಸಿದ್ದು, ಪಲ್ಲವಿ ಸಾವಿನ ಬಗ್ಗೆ ಕುಟುಂಬದವರು ಅನುಮಾನ ವ್ಯಕ್ತಪಡಿಸಿದ್ದಾರೆ. ಪಲ್ಲವಿ ಪತಿಯೇ ಕೊಲೆ ಮಾಡಿರುವ ಶಂಕೆಯಿಂದ ಸುದ್ದಗುಂಟೆಪಾಳ್ಯ ಠಾಣೆಗೆ ದೂರು ನೀಡಿದ್ದಾರೆ. ಸುದ್ದಗುಂಟೆಪಾಳ್ಯ ಠಾಣೆಯಲ್ಲಿ ಯುಡಿಆರ್ ಕೇಸ್ ದಾಖಲಾಗಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...