alex Certify ಹೆರಿಗೆ ವೇಳೆಯಲ್ಲೇ ನವಜಾತ ಶಿಶು ಸಾವು: ವೈದ್ಯರ ನಿರ್ಲಕ್ಷ್ಯ ಆರೋಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೆರಿಗೆ ವೇಳೆಯಲ್ಲೇ ನವಜಾತ ಶಿಶು ಸಾವು: ವೈದ್ಯರ ನಿರ್ಲಕ್ಷ್ಯ ಆರೋಪ

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆ ಆನೇಕಲ್ ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆ ವೇಳೆ ನವಜಾತ ಶಿಶು ಮೃತಪಟ್ಟಿದ್ದು, ವೈದ್ಯರ ನಿರ್ಲಕ್ಷ್ಯ ಕಾರಣ ಎಂದು ಪೋಷಕರು ಆರೋಪಿಸಿದ್ದಾರೆ.

ಆನೇಕಲ್ ಪಂಪ್ ಹೌಸ್ ನಿವಾಸಿ ಸುಮಲತಾ ಇಂದು ಬೆಳಿಗ್ಗೆ 10:30 ಕ್ಕೆ ಹೆರಿಗೆ ನೋವಿನ ಕಾರಣ ಆಸ್ಪತ್ರೆಗೆ ಬಂದಿದ್ದಾರೆ ಬೆಳಗ್ಗೆ 11 ಗಂಟೆಯಿಂದ ನಾರ್ಮಲ್ ಡೆಲಿವರಿಗೆ ವೈದ್ಯರು ಪ್ರಯತ್ನಿಸಿದ್ದಾರೆ. ಇದೇ ವೇಳೆ ಮಗುವಿಗೆ ಉಸಿರಾಟದ ತೊಂದರೆ ಇದೆ ಎಂದು ವೈದ್ಯರು ಹೇಳಿದ್ದಾರೆ.

ನಾರ್ಮಲ್ ಹೆರಿಗೆ ಮಾಡಿಸಲು ಪ್ರಯತ್ನ ನಡೆಸಿದ್ದು, ಮಗು 4.5 ಕೆಜಿ ತೂಕ ಇದ್ದ ಕಾರಣ ನಾರ್ಮಲ್ ಡೆಲಿವರಿ ಸಾಧ್ಯವಾಗಿಲ್ಲ. ಬಳಿಕ ಸಿಸೇರಿಯನ್ ಮಾಡಲಾಗಿದೆ. ಮಗುವನ್ನು ಹೊರ ತೆಗೆದಾಗ ದೇಹದ ತುಂಬಾ ಗಾಯವಾಗಿದೆ. ಬಳಿಕ ಮಗು ಮೃತಪಟ್ಟಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಶಿಶುವಿನ ಸಾವಿಗೆ ವೈದ್ಯರ ನಿರ್ಲಕ್ಷವೇ ಕಾರಣವೆಂದು ಪೋಷಕರು ಆರೋಪಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...